ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಮಂಗಳವಾರ, ಸೆಪ್ಟೆಂಬರ್ 14, 2010

ಸಂಬಂಧ

ಯಾರೂ ಬೇಡವೆಂದವರು
ಯಾರಿಗೂ ಬೇಡವಾಗುವರು
ಸ್ವಹಿತವೇ ಮೇಲೆಂಬರು
ಇತರರನು ದೂರುವರು
ಮೂಲೆಗುಂಪಾಗುವರು


ಎಲ್ಲರೂ ಬೇಕೆಂಬವರೂ
ಯಾರಿಗೂ ಬೇಡವಾಗುವರು
ಅವರ ಪರವೆಂದಿವರು
ಇವರ ಪರವೆಂದವರು
ದೂರಿ ದೂಡಿಬಿಡುವರು
*********
-ಕ.ವೆಂ.ನಾಗರಾಜ್.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ