ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಬುಧವಾರ, ನವೆಂಬರ್ 10, 2010

ಮೂಢ ಉವಾಚ -23: ಗೆಲುವು

ಹಿಡಿದ ಗುರಿಯನು ಸಾಧಿಸುವವರೆಗೆ
ಮುಂದಿಟ್ಟ ಹೆಜ್ಜೆಯನು ಹಿಂದಕ್ಕೆ ಇಡದೆ|
ಆವೇಶ ಉತ್ಸಾಹ ನರನಾಡಿಯಲಿರಿಸೆ
ಯಶವರಸಿ ಹರಸುವುದು ಕಾಣು ಮೂಢ||


ಕಷ್ಟನಷ್ಟಗಳೆರಗಿ ಕಾಡಿ ದೂಡಲುಬಹುದು
ಆಸೆ ಆಮಿಷಗಳು ದಾರಿ ತಪ್ಪಿಸಬಹುದು|
ಮೈಮರೆತು ಜಾರದೆ ನಿರಾಶೆಗೆಡೆಗೊಡದೆ
ಅಡಿಯ ಮುಂದಿಡಲು ಗೆಲುವೆ ಮೂಢ||


ಕಷ್ಟ ಕೋಟಲೆಗಳು ಮೆಟ್ಟಿನಿಲುವುದಕಾಗಿ
ಕುಗ್ಗಿ ಕುಳಿತಲ್ಲಿ ಕಷ್ಟಗಳು ಓಡುವುವೆ?|
ವೀರನಿಗೆ ಅವಕಾಶ ಹೇಡಿಗದು ನೆಪವು
ನಿಲುವು ಸರಿಯಿರಲು ಗೆಲುವೆ ಮೂಢ||


ಅನುಭವದ ನೆಲೆಯಲ್ಲಿ ಬುದ್ಧಿಯ ಒರೆಯಲ್ಲಿ
ಆತ್ಮವಿಶ್ವಾಸವದು ತುಂಬಿ ತುಳುಕಿರಲು|
ಅಪಾಯವೆದುರಿಸುವ ಗಟ್ಟಿತನವಿರಲು
ನಾಯಕನು ಉದಯಿಸುವ ಕಾಣು ಮೂಢ||
********************
-ಕವಿನಾಗರಾಜ್.

2 ಕಾಮೆಂಟ್‌ಗಳು:

  1. [ವೀರನಿಗೆ ಅವಕಾಶ ಹೇಡಿಗದು ನೆಪವು]
    ಚಿನ್ನದಂತಹ ಮಾತು. ಆದರೆ ಅಂತಹ ಪರಿಸ್ಥಿತಿ ಎದುರಾದಾಗ ತರಗೆಲೆಯಂತೆ ತೂರಿಹೋಗುವುದೇ ಹೆಚ್ಚು.ಇದಕ್ಕೆಲ್ಲಾ ಮನಸ್ಸೇ ಕಾರಣ. ಮನಸ್ಸನ್ನು ಗಟ್ಟಿಮಾಡಿಕೊಳ್ಳುವ ವಿಧಾನವನ್ನು ನಿಮ್ಮ ಮಾತಿನಲ್ಲಿ ಸರಳವಾಗಿಯೇ ಬರೆಯುವಿರಾ?

    ಪ್ರತ್ಯುತ್ತರಅಳಿಸಿ
  2. ಶ್ರೀಧರ್, ಪ್ರಶಂಸೆ ಮುದಕೊಡದಿರದೆ? ವೇದಸುಧೆಯ ಕೆಲಸ ಮನಸ್ಸು ಗಟ್ಟಿಗೊಳಿಸುವ ಕಾರ್ಯವಲ್ಲದೆ ಮತ್ತೇನು?

    ಪ್ರತ್ಯುತ್ತರಅಳಿಸಿ