ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಸೋಮವಾರ, ಡಿಸೆಂಬರ್ 20, 2010

ಮೂಢ ಉವಾಚ -39 : ಅರಿವು

ಸಕಲರುದ್ಧಾರವೇ ಧರ್ಮಶಾಸ್ತ್ರದ ಸಾರ
ಪರಮಪದಕಿಹುದು ನೂರಾರು ದಾರಿ |
ದಾರಿ ಹಲವಿರಲು ಗುರಿಯಹುದು ಒಂದೆ
ಮನವೊಪ್ಪುವ ದಾರಿಯಲಿ ಸಾಗು ಮೂಢ ||


ಇರಲೆಮಗೆ ನಮ್ಮ ಪಥ ಬೇಕಿಲ್ಲ ಪರಪಥ
ಮನಕೊಪ್ಪುವ ಪಥದಿ ಸಾಗಲಿ ಸಕಲಜನ |
ಅವರ ದಾರಿ ಅವರಿಗಿರಲಿ ಗುರಿಯೊಂದೆ
ತಲುಪುವ ಗಮ್ಯವೊಂದೇ ಮೂಢ ||


ಬೆಳಕಿರುವೆಡೆಯಲ್ಲಿ ಕತ್ತಲೆಯು ಇದ್ದೀತೆ
ಜ್ಞಾನವಿರುವೆಡೆಯಲ್ಲಿ ಅಜ್ಞಾನ ಸುಳಿದೀತೆ |
ಅರಿವು ಬರಲಾಗಿ ತರತಮವು ಮಾಯ
ಅಭೇದಭಾವಿ ಅಮರನವನು ಮೂಢ ||


ಜ್ಞಾನಯಜ್ಞವದು ಸಕಲಯಜ್ಞಕೆ ಮಿಗಿಲು
ಜಪತಪಕೆ ಮೇಣ್ ಹೋಮಹವನಕೆ ಮಿಗಿಲು |
ಸಕಲಫಲಕದು ಸಮವು ಆತ್ಮದರಿವಿನ ಫಲ
ಅರಿವಿನ ಪೂಜೆಯಿಂ ಪರಮಪದ ಮೂಢ ||
**************
-ಕವಿನಾಗರಾಜ್.

2 ಕಾಮೆಂಟ್‌ಗಳು: