ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಭಾನುವಾರ, ಜನವರಿ 23, 2011

ವೇದಸುಧೆ ಅಂತರ್ಜಾಲ ತಾಣದ ಪ್ರಥಮ ವಾರ್ಷಿಕೋತ್ಸವ ಮತ್ತು ಮನೆಮನೆಕವಿಗೋಷ್ಠಿ

ವೇದಸುಧೆ ಅಂತರ್ಜಾಲ ತಾಣದ ಪ್ರಥಮ ವಾರ್ಷಿಕೋತ್ಸವ ಮತ್ತು ಮನೆಮನೆಕವಿಗೋಷ್ಠಿಯ 14ನೆಯ ವಾರ್ಷಿಕೋತ್ಸವಕ್ಕೆ ಬನ್ನಿ
     ಹಾಸನದಲ್ಲಿ ದಿನಾಂಕ 30-01-2011ರಂದು  ವೇದಸುಧೆ ಅಂತರ್ಜಾಲ ತಾಣದ ಪ್ರಥಮ ವಾರ್ಷಿಕೋತ್ಸವ ಮತ್ತು ಮನೆಮನೆಕವಿಗೋಷ್ಠಿಯ 14ನೆಯ ವಾರ್ಷಿಕೋತ್ಸವ ನಡೆಯಲಿದ್ದು ತಮಗೆ  ಆತ್ಮೀಯ ಆಹ್ವಾನವಿದೆ.
ಕಾರ್ಯಕ್ರಮದ ಆಹ್ವಾನ ಪತ್ರಿಕೆ


ಮಂಗಳವಾರ, ಜನವರಿ 18, 2011

ಮೂಢ ಉವಾಚ -41 : ಹಸಿವು

ಹಸಿದವಗೆ ಹುಸಿ ವೇದಾಂತ ಬೇಡ
ಕಥೆ ಕವನ ಸಾಹಿತ್ಯ ಬೇಡವೇ ಬೇಡ |
ಬಳಲಿದ ಉದರವನು ಕಾಡಬೇಡ
ಮುದದಿ ಆದರಿಸಿ ಮೋದಪಡು ಮೂಢ ||


ಹೊಟ್ಟೆಯ ತೊಟ್ಟಿಯದು ತುಂಬುವುದು ಎಂದು?
ಹಸಿವು ಮಾಡಿಸುವ ಕುಕರ್ಮಗಳೆನಿತೊಂದು |
ಬಂಧಗಳ ಹೆಣೆಯುವುದು ಪಾಶಗಳ ಬೀಸುವುದು
ಆತ್ಮಾಭಿಮಾನ ಮರೆಸುವುದೊ ಮೂಢ ||


ಹಸಿವಿನಿಂ ಬಳಲುತಿರೆ ಹೊನ್ನು ಬೇಕೇನು?
ಹಸಿವಿನಿಂ ನರಳುತಿರೆ ಹೆಣ್ಣು ಬೇಕೇನು? |
ಹಸಿವು ಹಿಂಗಿಸಲು ಅನ್ನವೇ ಬೇಕು
ಹೊಟ್ಟೆ ತುಂಬಿರಲೆಲ್ಲವೂ ಬೇಕು ಮೂಢ ||


ಪರಮಾತ್ಮನೆಂಬುವನು ಎಲ್ಲಿಹನು ಕೇಳಿ
ದೇವಭಕ್ತರೆ ಹೇಳಿ ಅರಿತವರೆ ತಿಳಿ ಹೇಳಿ |
ದೇವನಿರದಿಹನೆ ಜೀವಿಗಳ ಉದರದಲಿ
ಹಸಿವಿರದಿರೆ ಪರಮಾತ್ಮನೆಲ್ಲಿ ಮೂಢ ||
-ಕವಿ ನಾಗರಾಜ್.

ಶ್ರೀಮತಿ ಲಲಿತಾ ರಮೇಶರವರ ಧ್ವನಿಯಲ್ಲಿ ಕೇಳಿ: