ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಬುಧವಾರ, ಫೆಬ್ರವರಿ 2, 2011

ಮೂಢ ಉವಾಚ -42 : ಅರಿವು-2

ಜನಿಸಿದವನೆಂದು ಸಾಯದಿಹನೇನು
ಚಿಂತಿಸಿದೊಡೆ ಓಡಿ ಪೋಪುದೆ ಸಾವು |
ಸಾವಿನ ಭಯಮರೆತು ಸಂತಸವ ಕಾಣು
ಅರಿವಿನಿಂ ಬಾಳಲದುವೆ ಬದುಕು ಮೂಢ ||


ಹೊರಗಣ್ಣು ತೆರೆದಿರಲು ಬೀಳುವ ಭಯವಿಲ್ಲ
ಒಳಗಣ್ಣು ತೆರೆದಿರಲು ಪತನದ ಭಯವಿಲ್ಲ|
ತಪ್ಪೊಪ್ಪಿ ನಡೆವವರು ಹಿರಿಯರೆಂದೆನಿಸುವರು
ತಪ್ಪೆ ಸರಿಯೆಂದವರು ಜಾರುವರು ಮೂಢ ||


ಬರುವಾಗ ತರಲಾರೆ ಹೋಗುವಾಗ ಒಯ್ಯೆ
ಇಹುದು ಬಹುದೆಲ್ಲ ಸಂಚಿತಾರ್ಜಿತ ಫಲವು |
ಸಿರಿ ಸಂಪದದೊಡೆಯ ನೀನಲ್ಲ ನಿಜದಿ ದೇವ
ಅಟ್ಟಡುಗೆಯುಣ್ಣದೆ ಫಲವಿಲ್ಲ ಮೂಢ||
-ಕ.ವೆಂ.ನಾಗರಾಜ್.

4 ಕಾಮೆಂಟ್‌ಗಳು: