ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಶುಕ್ರವಾರ, ಫೆಬ್ರವರಿ 11, 2011

ಮೊರೆ

ದಿನಾಂಕ 30-01-2011ರಂದು ಹಾಸನದಲ್ಲಿ ನಡೆದ 'ವೇದಸುಧೆ' ಅಂತರ್ಜಾಲ ತಾಣದ ವಾರ್ಷಿಕೋತ್ಸವದಲ್ಲಿ ಶ್ರೀಮತಿ ಲಲಿತಾರಮೇಶರವರು ರಾಗ ಸಂಯೋಜಿಸಿ ಹಾಡಿದ ಕವಿನಾಗರಾಜರ ರಚನೆ:


Untitled from hariharapurasridhar on Vimeo.
--ಹರಿಹರಪುರ ಶ್ರೀಧರ್.
ಸಾಹಿತ್ಯ:
ಮೊರೆ
ಸರಿಸಿಬಿಡು ಮೂಢಮನ ಆವರಿತ ಪೊರೆಯಾ
ತೆರೆದುಬಿಡು ಕಿಟಕಿಯನು ಒಳಬರಲಿ ಬೆಳಕು|
ರೂಢಿರಾಡಿಯಲಿ ಸಿಲುಕಿ ತೊಳಲಾಡುತಿಹೆ ನಾನು
ಕರುಣೆದೋರೈ ದೇವ ಸತ್ಪಥದಿ ಮುನ್ನಡೆಸು||

ಸರ್ವರೊಳ್ಳಿತ ಬಯಸಿ ಸ್ವಂತಹಿತ ಕಡೆಗಿಟ್ಟೆ

ಸರ್ವದೂಷಿತನಾಗಿ ನೆಲೆಗಾಣದಿದೆ ಮನವು|
ಅರಿಗಳಾರರ ಬಂದಿ ದಿಕ್ಕೆಟ್ಟು ಕುಳಿತಿರುವೆ
ಸದ್ಗುರುವೆ ಕೃಪೆದೋರಿ ಹಿಡಿದೆತ್ತಿ ಸಂತಯಿಸು||

ಪಂಡಿತನು ನಾನಲ್ಲ ಪಾಂಡಿತ್ಯವೆನಗಿಲ್ಲ
ಒಳಮನದ ನುಡಿಯೊಂದೆ ಆಸರೆಯು ನನಗೆಲ್ಲ|
ಹುಲುಮನುಜ ನಾನಾಗಿ ಭಾವಬಂಧಿಯು ನಾನು
ಸಮಚಿತ್ತ ಕರುಣಿಸೈ ನೆಮ್ಮದಿಯ ನೀ ನೀಡು||
************
-ಕ.ವೆಂ.ನಾ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ