ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಮಂಗಳವಾರ, ಅಕ್ಟೋಬರ್ 4, 2011

ಮೂಢ ಉವಾಚ - 74


ಸ್ವರ್ಗವೆಂಬುದು ಕೇಳು ಪುಣ್ಯ ತೀರುವ ತನಕ
ನರಕವೆಂಬುದಿದೆ  ಪಾಪ ಕಳೆಯುವ ತನಕ 
ನಿನ್ನೊಳಗೆ ನಾನು ನನ್ನೊಳಗೆ ನೀನೆನಲು
ಸಚ್ಚಿದಾನಂದಭಾವ ಕೊನೆತನಕ ಮೂಢ ||


ಸ್ವರ್ಗವನು ಬಯಸುವರು ಕಾಮಿಗಳು ಕೇಳು
ನಿಜಭಕ್ತರವರಲ್ಲ ಜ್ಞಾನಿಗಳು ಮೊದಲಲ್ಲ 
ಅಂಜಿಕೆಯ ಮೇಲೆ ನರಕ ನಿಂತಿರಲು
ಆಸೆಯೇ ಸಗ್ಗಕಾಧಾರ ಮೂಢ ||


ಸಾಲುಗಟ್ಟಿಹೆವು ಕೆಲರ್ ಮುಂದೆ ಕೆಲರ್ ಹಿಂದೆ
ಸರಿಸರಿದು ಸಾಗಿ ಬರಲಿಹುದು ಸಾವು
ಸಾವು ನಿಶ್ಚಿತವಿರಲು ಜೀವಿಗಳೆಲ್ಲರಿಗೆ
ಜಾಣರಲಿ ಜಾಣರು ಬದುಕುವರು ಮೂಢ ||


ಸೋಮಾರಿ ಸಾಯುವನು ಸ್ವಾರ್ಥಿ ಸಾಯುವನು
ಹೇಡಿ ಸಾಯುವನು ವೀರನೂ ಸಾಯುವನು
ದೇವ ನಿಯಮವಿದು ಎಲ್ಲರೂ ಸಾಯುವರು
ಬದುಕಿ ಸಾಯುವರ ನೆನೆಯೋ ಮೂಢ ||
****************
-ಕ.ವೆಂ.ನಾಗರಾಜ್.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ