ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಶುಕ್ರವಾರ, ಅಕ್ಟೋಬರ್ 14, 2011

ಮೂಢ ಉವಾಚ - 75


ಕೇಳುತಿರ್ದೊಡೆ ತಿಳಿವ ಬೀಜ ಮೊಳೆತೀತು
ಮೊಳಕೆ ಬೆಳೆದೀತು ಕಾಣುವ ನೋಟವಿರೆ
ಮನನದ ನೀರೆರೆದು ಅನುಭವದಿ ಕಳೆಕೀಳೆ
ಅದ್ಭುತಾಮೃತ ಫಲ ನಿನದೆ ಮೂಢ ||


ಶುಭವ ನೋಡದಿರೆ ಕಣ್ಣಿದ್ದು ಕುರುಡ
ಶುಭವ ಕೇಳದಿರೆ ಕಿವಿಯಿದ್ದು ಕಿವುಡ
ಶುಭವ ನುಡಿಯದಿರೆ ಬಾಯಿದ್ದು ಮೂಕ
ಇದ್ದೂ ಇಲ್ಲದವನಾಗದಿರು ಮೂಢ ||


ಕಂಡವರು ಯಾರಿಹರು ಜೀವ ಚೇತನವ
ತರ್ಕವನೆ ಮಾಡುವರು ಅವಿನಾಶಿಯೆನ್ನುವರು |
ವಾದಗಳ ಮುಂದಿರಿಸಿ ವಿನಾಶಿಯೆಂದಿಹರು
ಅನುಭಾವಿ ತಿಳಿದಾನು ಉತ್ತರವ ಮೂಢ ||


ದೇಹವೆಂಬುದು ರಥವು ಬುದ್ಧಿಯೇ ಸಾರಥಿಯು
ಇಂದ್ರಿಯಾಶ್ವವನು ಚಿತ್ತ ಹಿಡಿದಿಹುದು |
ಒಡೆಯ ಹೇಳ್ದಂತೆ ಸಾಗುವನು ಸಾರಥಿಯು
ಒಡೆಯನಾರೆಂದು ತಿಳಿದಿಹೆಯ ಮೂಢ ||
*********************
-ಕ.ವೆಂ.ನಾಗರಾಜ್.

2 ಕಾಮೆಂಟ್‌ಗಳು: