ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಸೋಮವಾರ, ಅಕ್ಟೋಬರ್ 17, 2011

ಮೂಢ ಉವಾಚ - 76


ದೇಹ ದೇವರಾಗಿ ಭೋಗ ಪೂಜೆಯಾಗಿ
ಇಂದ್ರಿಯದಾಸನಾಗಿ ವಿಷಯದ ಬೇಟೆಯಲಿ |
ಹುಲು ತೃಪ್ತಿ ಗುರಿಯಾಗಿ ಅರಿಗೆ ಶರಣಾಗಿ
ಕೂಪದಲಿ ಬಿದ್ದರೇಳುವರೆ ಮೂಢ || 


ವಾಸನೆಯು ಬಿರುಗಾಳಿ ವಿಚಾರ ತರಗೆಲೆಯು
ಆಸೆ ನಗುವುದು ವಿಚಾರ ಸೋಲುವುದು |
ಜಾರುವುದರಿತರೂ ನಾಶವಾಗದು ಚಪಲ
ಸಕಲ ಸಂಕಟಕೆ ಮೂಲವಿದು ಮೂಢ ||


ಪರಮಾತ್ಮ ರಚಿಸಿಹನು ಭವ್ಯ ಬ್ರಹ್ಮಾಂಡ
ಬ್ರಹ್ಮಾಂಡಕಿಂ ಹಿರಿದಲ್ತೆ ಅಂತರಂಗದ ಹರವು |
ಪರಮಾತ್ಮ ಕಾಣನೆ ಒಳಗೆ ನಿನ್ನೊಳಗೆ
ಅಣೋರಣೀಯನ ಮಹತಿಯಿದು ಮೂಢ ||


ನಂಬಿದ್ದೆ ಸರಿಯೆಂಬ ಜಿಗುಟುತನವೇಕೆ
ನಿಜವ ನಂಬಲು ಹಿಂಜರಿಕೆಯೇಕೆ |
ಜಿಜ್ಞಾಸೆಯಿರಲಿ ಹೇಗೆ ಏನು ಏಕೆ
ಹಿರಿಯ ನಿಜವರಿತು ನಡೆವ ಮೂಢ ||
**************
-ಕ.ವೆಂ.ನಾಗರಾಜ್.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ