ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಬುಧವಾರ, ನವೆಂಬರ್ 9, 2011

ಮೂಢ ಉವಾಚ - 79

ಏನಿದೇನಿದೀ ಮಾಯೆ ಏನಿದೇನಿದೀ ಚೋದ್ಯ
ಇರುವುದೇ ಮೂರು ದಿನ ಜಗವನೆ ಬಯಸಿಹರು |
ಚಿರಕಾಲ ಬದುಕೆಂದು ಭ್ರಮೆಯ ತಳೆದಿಹರು
ಈ ಜಗವ ನಡೆಸಿಹುದು ಮಾಯೆ ಮೂಢ || 


ನೂರು ಜನ್ಮವು ಅಲ್ಪ ತಿಳಿಯಲೀ ಜಗವ
ಅಲ್ಪಜ್ಞ ಕುಣಿವ ತೋರಿ ಪಂಡಿತನ ಭಾವ |
ಪರರ ಹೀಗಳೆದು ತಾನೆ ಸರಿಯೆನುವವನು
ಮಾಯೆಯ ಬಲೆಯಲಿಹ ಕೀಟ ಮೂಢ ||
***************
-ಕ.ವೆಂ.ನಾಗರಾಜ್.

ಪ್ರಾಸಂಗಿಕವಾಗಿ ಈ ಸುದ್ದಿ ತಮ್ಮ ಗಮನಕ್ಕಾಗಿ:
:

1 ಕಾಮೆಂಟ್‌: