ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಬುಧವಾರ, ನವೆಂಬರ್ 30, 2011

ಛತ್ರಪತಿ ಶಿವಾಜಿಯ ತಂದೆಯ ಸಮಾಧಿಗೆ ಸ್ಥಳ ಒದಗಿಸಿದವರು ಕೆಳದಿಯರಸರು


     ಶಿವಾಜಿಯ ತಂದೆ ಶಹಾಜಿ ಭೋಸ್ಲೆ ಕರ್ನಾಟಕದ ಹೋದಿಗ್ಗೆರೆ (ಚನ್ನಗಿರಿ ತಾಲ್ಲೂಕು, ದಾವಣಗೆರೆ ಜಿಲ್ಲೆ) ಅರಣ್ಯದಲ್ಲಿ ಬೇಟೆಯಾಡುವ ಸಂದರ್ಭದಲ್ಲಿ ಕುದುರೆಯಿಂದ ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡು ೧೬೬೫ರಲ್ಲಿ ಮೃತನಾದಾಗ ಆತನ ದೇಹವನ್ನು ಹೋದಿಗ್ಗೆರೆಯಲ್ಲೇ ಸಮಾಧಿ ಮಾಡಲಾಯಿತು. ಆಗ ಹೋದಿಗ್ಗೆರೆ ಕೆಳದಿಯ ರಾಜ್ಯದ ಸೀಮೆಯಲ್ಲೇ ಬರುತ್ತಿದ್ದು, ಶಹಾಜಿಯನ್ನು ಆ ಗ್ರಾಮದಲ್ಲೇ ಸಮಾಧಿ ಮಾಡಲು ಅವಕಾಶ ಕೊಟ್ಟದ್ದು ಕೆಳದಿಯ ಅರಸರೇ. ಈ ಸಮಾಧಿಯನ್ನು ಸರ್ಕಾರವು ಸಂರಕ್ಷಿತ ಸ್ಮಾರಕವೆಂದು ಘೋಷಿಸಿದೆ. ಶಿವಾಜಿಯ ಅನುಯಾಯಿಗಳಾಗಿ ಈಗ ಬೆಳಗಾವಿ ಮುಂದಿಟ್ಟುಕೊಂಡು ಶಾಂತಿ ಕದಡಲು ಪ್ರಯತ್ನಿಸುತ್ತಿರುವವರು ವಾಸ್ತವವಾಗಿ ಕರ್ನಾಟಕಕ್ಕೆ ಕೃತಜ್ಞರಾಗಿರಬೇಕಲ್ಲವೇ?
********************
-ಕ.ವೆಂ.ನಾಗರಾಜ್.

3 ಕಾಮೆಂಟ್‌ಗಳು:

  1. ಬಹಳ ಒಳ್ಳೆಯ ಮಾಹಿತಿ ಕೊಟ್ಟಿದ್ದೀರಿ ಸರ್ , ಬೆಳಗಾವಿ ಮರಾಟಿಗರು ಇದನ್ನು ಅರಿಯುವುದು ಒಳ್ಳೆಯದು.
    ಪ್ರೀತಿಯಿಂದ ನಿಮ್ಮವ [ನಿಮ್ಮೊಳಗೊಬ್ಬಬಾಲು. ]

    ಪ್ರತ್ಯುತ್ತರಅಳಿಸಿ
  2. ಆತ್ಮೀಯರಾದ ಪ್ರತಾಪ್ ಬ್ರಹ್ಮಾವರ್ ಮತ್ತು ಬಾಲುರವರಿಗೆ ಧನ್ಯವಾದಗಳು.

    ಪ್ರತ್ಯುತ್ತರಅಳಿಸಿ