ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಬುಧವಾರ, ಡಿಸೆಂಬರ್ 21, 2011

ಲೋಕ ಕಲ್ಯಾಣಾರ್ಥ?

     ನಾನು ಮತ್ತು ನನ್ನ ಪತ್ನಿ ಇತ್ತೀಚೆಗೆ ಕೊಲ್ಲೂರು ಮೂಕಾಂಬಿಕೆಯ ದೇವಸ್ಥಾನಕ್ಕೆ ಹೋಗಿದ್ದಾಗ ಕಂಡ ದೃಷ್ಯದ ಒಂದು ತುಣುಕು ಸೆರೆ ಹಿಡಿದು ಇಲ್ಲಿ ಹಾಕಿರುವೆ. ದೇವಸ್ಥಾನದ ಪ್ರಾಂಗಣದ ಸುತ್ತಲೂ ಹರಳು ಉಪ್ಪನ್ನು ಹರಡಲಾಗಿತ್ತು, ಅದರ ಮೇಲೆ ವ್ಯಕ್ತಿಯೊಬ್ಬರು ಹೊರಳುತ್ತಾ ಪ್ರದಕ್ಷಿಣೆ ಮಾಡುತ್ತಿದ್ದರು. ಹರಳು ಉಪ್ಪಾಗಿದ್ದರಿಂದ ಶರೀರಕ್ಕೆ ಚುಚ್ಚಿ ಅವರಿಗೆ ನೋವಾಗುತ್ತಿದ್ದುದು ಕಣ್ಣಿಗೆ ತಿಳಿಯುತ್ತಿತ್ತು. 'ಉರಿಯುವ ಗಾಯದ ಮೇಲೆ ಉಪ್ಪು ಸವರಿದಂತೆ' ಎಂಬ ಗಾದೆಯ ನೆನಪಾಯಿತು. ನೋವು ಅನುಭವಿಸಿ ಉರುಳುಸೇವೆ ಮಾಡುತ್ತಿದ್ದ ಅವರು ಉರುಳಲಾಗದೆ ಕೆಲವೊಮ್ಮೆ 5-10 ನಿಮಿಷಗಳು ಕಣ್ಣು ಮುಚ್ಚಿ ಅಲ್ಲೇ ಮಲಗಿರುತ್ತಿದ್ದರು. ಅವರನ್ನು ಅನುಸರಿಸಿ ಬರುತ್ತಿದ್ದ ಜೊತೆಯವರು ಭಜನೆ ಮಾಡುತ್ತಾ ಬರುತ್ತಿದ್ದರು. ಲೋಕ ಕಲ್ಯಾಣಾರ್ಥ ಅವರು ಹೀಗೆ ಉರುಳುಸೇವೆ ಮಾಡುತ್ತಿದ್ದರಂತೆ. ಇದರಿಂದ ಲೋಕಕಲ್ಯಾಣ ಹೇಗೆ ಆದೀತು ಎಂದು ನನಗಂತೂ ಅರ್ಥವಾಗಲಿಲ್ಲ. ಸುಮಾರು 50-60 ಮೂಟೆ ಉಪ್ಪು ಅಲ್ಲಿ ಸುರಿಯಲಾಗಿದ್ದು, ಅದು ನಂತರದಲ್ಲಿ ಉಪಯೋಗಕ್ಕೂ ಬರಲಾರದು. ಲೋಕಕಲ್ಯಾಣ ಹೇಗೆ ಆಗುತ್ತದೆ ಎಂದು ಯಾರಾದರೂ ಗೊತ್ತಿದ್ದರೆ ತಿಳಿಸುವಿರಾ?


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ