ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಬುಧವಾರ, ಜುಲೈ 11, 2012

ಮೂಢ ಉವಾಚ - 85

ಬಯಸಿದರು ಸಾವೆ ಬಯಸದಿದ್ದರು ಸಾವೆ
ಬೇಡವೆಂದರೆ ನೀನು ಬರದಿಹುದೆ ಸಾವು |
ಬೇಡದಿರು ಮನವೆ ಬೇಡದಿಹ ಸಾವ
ಅಡ್ಡದಾರಿಯಲಿ ನುಗ್ಗದಿರು ಮೂಢ || ..293


ಜೀವವಿರುವ ದೇಹದಲ್ಲಿ ದೇವನಿರುವ ಕಾಣು
ಜೀವವಿರದ ದೇಹವದು ಹರಿದ ಬಟ್ಟೆ ತಾನು |
ಸುಟ್ಟರೂ ಹೂತರೂ ಅದಕೆ ತಿಳಿಯದಲ್ಲ
ಸಂಸ್ಕಾರ ಸಿಗಬೇಕು ಮನಕೆ ಮೂಢ || ..294


ಹುಟ್ಟು ಮೊದಲಲ್ಲ ಸಾವು ಕೊನೆಯಲ್ಲ
ಹುಟ್ಟು ಸಾವಿನ ಕೊಂಡಿ ಬದುಕಿನಾ ಬಂಡಿ |
ಹಿಂದಕೋ ಮುಂದಕೋ ಬಂಡಿ ಸಾಗುವುದು
ನಶಿಸಿದರೆ ಏರುವೆ ಹೊಸಬಂಡಿ ಮೂಢ || ..295


ಬಂಡಿಗೊಡೆಯನು ನೀನೆ ಪಯಣಿಗನು ನೀನೆ
ಅವನ ಕರುಣೆಯಿದು ಅಹುದಹುದು ತಾನೆ |
ಗುರಿಯ ಅರಿವಿರಲು ಸಾರ್ಥಕವು ಪಯಣ
ಗುರಿಯಿರದ ಪಯಣ ವ್ಯರ್ಥ ಮೂಢ || ..296
************
-ಕ.ವೆಂ.ನಾಗರಾಜ್.

2 ಕಾಮೆಂಟ್‌ಗಳು: