ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಮಂಗಳವಾರ, ಆಗಸ್ಟ್ 28, 2012

ಮೂಢ ಉವಾಚ - 88



ಕರ್ಮಕಿಂ ಮಿಗಿಲು ಜ್ಞಾನಕಿಂ ಮಿಗಿಲು
ಯೋಗಕಿಂ ಮಿಗಿಲು ಭಕ್ತಿಯ ಹೊನಲು |
ಮೂರರ ಗುರಿಯೆ ಭಕ್ತಿ ತಾನಾಗಿರಲು
ಭಕ್ತಿಯೇ ಸಿರಿ ನೀನರಿಯೊ ಮೂಢ || ..305

ಭಕ್ತಿಯದು ಸಿದ್ಧಿಸಲು ಏಕಾಂತವಿರಬೇಕು
ದೇವ ಸುಜನರೊಡೆ ಕೂಡಿಯಾಡಲುಬೇಕು |
ಗುರುಕರುಣೆಯಲಿ ನಲಿಯುತಿರಬೇಕು 
ನಿರ್ಮಮದಿ ಸಚ್ಚಿದಾನಂದ ಮೂಢ || ..306


ನಯನ ನೋಡುವುದು ತನಗಾಗಿ ಅಲ್ಲ
ಕಿವಿಯು ಕೇಳುವುದು ತನಗಲ್ಲವೇ ಅಲ್ಲ |
ದೇಹವಿದು ದಣಿಯುವುದು ದೇಹಕೆಂದಲ್ಲ
ಯಾರಿಗಾಗೆಂದು ಗೊತ್ತಿಹುದೆ ಮೂಢ || ..307

ತನ್ನಿಷ್ಟ ಬಂದಂತೆ ನಯನ ನೋಡುವುದೆ?
ತಮ್ಮಿಚ್ಛೆಯಂತೆ ಕೈಕಾಲು ಆಡುವುವೆ? |
ತನುವಿನೊಳಗಿಹ ಅವನಿಚ್ಛೆಯೇ ಪರಮ
ಅವನಿರುವವರೆಗೆ ಆಟವೋ ಮೂಢ || ..308
*********************
-ಕ.ವೆಂ.ನಾಗರಾಜ್.


2 ಕಾಮೆಂಟ್‌ಗಳು: