ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಶನಿವಾರ, ನವೆಂಬರ್ 24, 2012

ಬನ್ನಿ, ಜಾಗರಣ ಕಾರ್ಯದಲ್ಲಿ ಪಾಲುಗೊಳ್ಳಿ

ಆತ್ಮೀಯರೇ,
     ನನ್ನ ಸೇವಾಕಾಲದ ಅನುಭವಗಳನ್ನು 'ಸೇವಾಪುರಾಣ' ಶೀರ್ಷಿಕೆಯಲ್ಲಿ ಸರಣಿ ಲೇಖನಗಳಾಗಿ ಪ್ರಕಟಿಸಿದಾಗ ಸಿಕ್ಕ ನಿಮ್ಮೆಲ್ಲರ ಪ್ರೋತ್ಸಾಹವನ್ನು ನಾನು ಮರೆಯಲಾರೆ. ಅದರಲ್ಲೂ ತುರ್ತು ಪರಿಸ್ಥಿತಿ ಕಾಲದ ನನ್ನ ಅನುಭವಗಳಿಗೆ ತೋರಲಾದ ಸ್ಪಂದನ,  ಅದನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲು ಮಾಡಿದ ಒತ್ತಾಯ ಸಹ ನನ್ನನ್ನು ಪುಳಕಿತಗೊಳಿಸಿತ್ತು. ಈಗ ಅದಕ್ಕೆ ಸಮಯ ಒದಗಿ ಬಂದಿದೆ. 'ಸರಳುಗಳ ಹಿಂದಿನ ಲೋಕ' ಎಂಬ ಹಿಂದಿನ ಶೀರ್ಷಿಕೆ ಬದಲಿಗೆ ಮಿತ್ರ ಹರಿಹರಪುರ ಶ್ರೀಧರ್ ಸಲಹೆಯಂತೆ  'ಆದರ್ಶದ ಬೆನ್ನು ಹತ್ತಿ . . " ಎಂಬ ಶೀರ್ಷಿಕೆ ಹೊತ್ತ ಪುಸ್ತಕ ದಿನಾಂಕ 29-11-2012 ರಂದು ಹಾಸನದ ರವೀಂದ್ರನಗರದ ಶ್ರೀ ರಾಮಕೃಷ್ಣ ವಿದ್ಯಾಲಯದ ಸಭಾಂಗಣದಲ್ಲಿ ಸಾ. 6-00ಕ್ಕೆ ಬಿಡುಗಡೆಯಾಗಲಿದೆ. ತುರ್ತು ಪರಿಸ್ಥಿತಿಯಲ್ಲಿ ಆಂತರಿಕ ಭದ್ರತಾ ಶಾಸನದ ಅನ್ವಯ ಬಂದಿಯಾಗಿದ್ದ ಅರಸಿಕೆರೆಯ ಶ್ರೀ ಕೆ.ಎನ್. ದುರ್ಗಪ್ಪ ಶ್ರೇಷ್ಠಿಯವರು ಪುಸ್ತಕದ ಲೋಕಾರ್ಪಣೆ ಮಾಡಲಿದ್ದಾರೆ.
     ವಿಶೇಷವೆಂದರೆ, ಹಾಸನ ಜಿಲ್ಲೆಯಲ್ಲಿ ತುರ್ತು ಪರಿಸ್ಥಿತಿ ವಿರುದ್ಧದ ಆಂದೋಲನದಲ್ಲಿ ಭಾಗವಹಿಸಿದವರೆಲ್ಲರನ್ನೂ ಒಟ್ಟುಗೂಡಿಸಿ ಅಂದು ಮ. 4-00 ರಿಂದ 6-00 ರವರೆಗೆ ಸಮಾವೇಶ ನಡೆಸಲು ನಮ್ಮದೇ ಆದ ಮಂಥನ ವೇದಿಕೆಯಿಂದ ವ್ಯವಸ್ಥೆಯಾಗಿದೆ. ರಾ.ಸ್ವ.ಸಂಘದ ಹಿರಿಯ ಪ್ರಚಾರಕರಾದ ಶ್ರೀ ಸು. ರಾಮಣ್ಣನವರು ಕರ್ನಾಟಕದಲ್ಲಿ ನಡೆದ ಐತಿಹಾಸಿಕ ಆಂದೋಲನದ ನೆನಪು ಮಾಡಿಕೊಡಲಿದ್ದಾರೆ. ಸಮಾವೇಶದಲ್ಲಿ ಪಾಲುಗೊಂಡವರು ತಮ್ಮ ಸಿಹಿ-ಕಹಿ ನೆನಪುಗಳನ್ನು ಮೆಲುಕು ಹಾಕಲಿದ್ದಾರೆ.
      ಮಿತ್ರರೆಲ್ಲರಿಗೂ ಇದು ನನ್ನ ಆತ್ಮೀಯ ಆಹ್ವಾನ. ಬನ್ನಿ, ಜಾಗರಣ ಕಾರ್ಯದಲ್ಲಿ ಪಾಲುಗೊಳ್ಳಿ.

2 ಕಾಮೆಂಟ್‌ಗಳು: