ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಬುಧವಾರ, ಜುಲೈ 3, 2013

ಅಪ್ಪ - ಮಗ - ಮೊಮ್ಮಗ


     ಅದೊಂದು ವಿಶಿಷ್ಟ ಸಂದರ್ಭ. ದಿನಾಂಕ 28-12-2008ರಂದು ಬೆಂಗಳೂರಿನಲ್ಲಿ ನಡೆದ ಕವಿ ಕುಟುಂಬಗಳ ಮತ್ತು ಬಂಧು-ಬಳಗದವರ ಸಮಾವೇಶದಲ್ಲಿ ದಿ. ಕವಿ ಸುಬ್ರಹ್ಮಣ್ಯಯ್ಯನವರ ವ್ಯಕ್ತಿತ್ವ ಪರಿಚಯಿಸುವ ಕೃತಿ 'ಕವಿ ಸುಬ್ರಹ್ಮಣ್ಯಯ್ಯ' ಅನ್ನು ಮೊಮ್ಮಗ ಕವಿನಾಗರಾಜ್ ರಚಿಸಿದ್ದು, ಅದನ್ನು ಬಿಡುಗಡೆ ಮಾಡಿದ್ದು ಕವಿ ಸುಬ್ರಹ್ಮಣ್ಯಯ್ಯನವರ ಮಗ ದಿ. ಕವಿ ವೆಂಕಟಸುಬ್ಬರಾಯರು.ದ್ವನಿವರ್ಧಕದ ಸಮಸ್ಯೆಯಿಂದ ಅವರ ಮಾತುಗಳು ಸ್ಪಷ್ಟವಾಗಿ ಕೇಳದಿದ್ದರೂ ಇದೊಂದು ಅಪರೂಪದ ವಿಡಿಯೋ ಆಗಿ ಉಳಿದಿರುವುದು ವಿಶೇಷ. ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ್ದ ಅವರು ತಮ್ಮ ತಂದೆಯ ಬಗ್ಗೆ ನೆನಪಿಸಿಕೊಂಡಿದ್ದಲ್ಲದೆ, ಮಕ್ಕಳು, ಮೊಮ್ಮಕ್ಕಳ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಅವರ ಭಾಷಣದ ಒಂದು ತುಣುಕು ಇದು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ