ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಸೋಮವಾರ, ಡಿಸೆಂಬರ್ 3, 2012

ಆ ಸ್ವತಂತ್ರ ಸ್ವರ್ಗಕೇ . .



     ಅದೊಂದು ಬಲು ವಿಶೇಷ ಸಂದರ್ಭ! ಈ ಹಾಡು ಕೇಳಿ. ವೇದಿಕೆಯಲ್ಲಿರುವವರು ಮತ್ತು ಅವರೆದುರು ಕುಳಿತು ಅತ್ಯಂತ ಸ್ಫೂರ್ತಿಯಿಂದ ಹಾಡುತ್ತಿರುವವರ ಪರಿಚಯ ನಿಮಗಾದರೆ ನೀವು ವಾಹ್ ! ಎನ್ನದೆ ಇರಲಾರಿರಿ. 1975-77ರಲ್ಲಿ ನಮ್ಮ ದೇಶದ ಮೇಲೆ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದ ಸಂದರ್ಭ. ಈಗಿನ ಎಷ್ಟೋ ಜನರಿಗೆ ಅದರ ಅರಿವಿಲ್ಲ. ಆದರೆ ಅಂದು ದೇಶದ ನಾಗರೀಕರ ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗಿತ್ತು. ಆರ್.ಎಸ್.ಎಸ್.ಸಹಿತ ಹಲವಾರು ಸಂಘಟನೆಗ     ಳನ್ನು  ನಿಷೇಧಿಸಿ ಅವುಗಳ ನಾಯಕರನ್ನು ಜೈಲಿಗೆ ತಳ್ಳಲಾಗಿತ್ತು. ಆಗ ಆ ತುರ್ತುಪರಿಸ್ಥಿತಿಯ ವಿರುದ್ಧ ಹೋರಾಡಿ ಇನ್ನೂ ನಮ್ಮೊಡನಿರುವ ಹಾಸನ ಜಿಲ್ಲೆಯ ಹಿರಿಯರು ಇವರು!! ವೇದಿಕೆಯಲ್ಲಿ ಆರ್.ಎಸ್.ಎಸ್. ಹಿರಿಯ ಪ್ರಚಾರಕರಾದ ಶ್ರೀ ಸು.ರಾಮಣ್ಣನವರು. ಅಕ್ಕ ಪಕ್ಕದಲ್ಲಿ ಅರಸೀಕೆರೆಯ ಪುರಸಭಾ ಮಾಜಿ ಅಧ್ಯಕ್ಷರಾದ ಶ್ರೀ ದುರ್ಗಪ್ಪಶೆಟ್ಟರು ಮತ್ತು ಅರಸೀಕೆರೆಯ ತಾಲ್ಲೂಕು ಸಂಘಚಾಲಕರಾದ ಶ್ರೀ ಶ್ರೀನಿವಾಸಮೂರ್ತಿಯವರು[ರಾಮಣ್ಣನವರ ಬಲಬದಿ]-ಇಬ್ಬರೂ ಅಂದು 'ಮೀಸಾ' ಬಂದಿಗಳಾಗಿದ್ದವರು!
     ಎದುರು ಕುಳಿತು ಚಪ್ಪಾಳೆ ತಟ್ಟಿ ಹಾಡುತ್ತಿರುವವರೆಲ್ಲಾ ಅಂದು ಹೋರಾಟದಲ್ಲಿ ಪಾಲ್ಗೊಂಡಿದ್ದ ಧೀರರು. ಅಂದಿನ ಹಲವರು ಇಂದು ನಮ್ಮೊಡನಿಲ್ಲ. ಇನ್ನೂ ಬದುಕಿದ್ದು ಭಾರತಮಾತೆಯ ವೈಭವದ ದಿನಗಳಿಗಾಗಿ ಸಮಾಜಕಾರ್ಯದಲ್ಲಿ ಸಕ್ರಿಯರಾಗಿರುವ ಹಿರಿಯರು ತಮ್ಮ ಉತ್ಸಾಹವನ್ನು ಬತ್ತಲು ಬಿಡದೆ ಭಾವುಕರಾಗಿ ಹಾಡುತ್ತಿರುವ ಅಪೂರ್ವ ಕ್ಷಣಗಳು ಇವು!!
     ವೇದಸುಧೆಯ ಗೌರವ ಸಂಪಾದಕರಾದ ಶ್ರೀ ಕವಿ ನಾಗರಾಜರೂ ಕೂಡ ಅಂದು ಹೋರಾಟದಲ್ಲಿ ಪಾಲ್ಗೊಂಡು ಸರ್ಕಾರೀ ಕೆಲಸ ಕಳೆದುಕೊಂಡು ಜೈಲು ವಾಸ ಅನುಭವಿಸಿದವರು. ಅವರು ಬರೆದಿರುವ ತನ್ನ ಹೋರಾಟದ ಅನುಭವ ಕಥನ "ಆದರ್ಶದ ಬೆನ್ನುಹತ್ತಿ.." ಕೃತಿಯ ಬಿಡುಗಡೆಯ ಸಂದರ್ಭದಲ್ಲಿ ಇಂತಹ ಒಂದು ಅಪೂರ್ವ ಅವಕಾಶವು ಹಾಸನದ ಜನತೆಗೆ ಲಭಿಸಿತ್ತು. 
-ಹರಿಹರಪುರ ಶ್ರೀಧರ್.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ