ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ

ಶುಕ್ರವಾರ, ಅಕ್ಟೋಬರ್ 21, 2016

ಶಿವಾಜಿಯ ತಂದೆ ಷಹಜಿಯ ಸಮಾಧಿ - ಹೊದಿಗೆರೆ, ಚನ್ನಗಿರಿ ತಾ.





     ಶಿವಾಜಿಯ ತಂದೆ ಷಹಜಿ ಭೋಸ್ಲೆ ಕರ್ನಾಟಕದ ಹೊದಿಗೆರೆ (ಚನ್ನಗಿರಿ ತಾಲ್ಲೂಕು, ದಾವಣಗೆರೆ ಜಿಲ್ಲೆ) ಅರಣ್ಯದಲ್ಲಿ ಬೇಟೆಯಾಡುವ ಸಂದರ್ಭದಲ್ಲಿ ಕುದುರೆಯಿಂದ ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡು ಕ್ರಿ.ಶ. 1664ರ ಜನವರಿ, 23ರಂದು ಮೃತನಾದಾಗ ಆತನ ದೇಹವನ್ನು ಹೊದಿಗೆರೆಯಲ್ಲೇ ಸಮಾಧಿ ಮಾಡಲಾಯಿತು. ಆಗ ಹೊದಿಗೆರೆ ಕೆಳದಿಯ ರಾಜ್ಯದ ಸೀಮೆಯಲ್ಲೇ ಬರುತ್ತಿದ್ದು, ಷಹಜಿಯನ್ನು ಆ ಗ್ರಾಮದಲ್ಲೇ ಸಮಾಧಿ ಮಾಡಲು ಅವಕಾಶ ಕೊಟ್ಟದ್ದು ಕೆಳದಿಯ ಅರಸರೇ. ಸಮಾಧಿ ಮಾಡಲು ಅವಕಾಶ ಕೊಡಬೇಕೇ, ಬೇಡವೇ ಎಂಬ ಬಗ್ಗೆ ದೀರ್ಘವಾದ ಮಂತ್ರಾಲೋಚನೆ ನಡೆದು, ಕೊನೆಗೆ ಷಹಜಿ ಮರಣ ಹೊಂದಿದ ಸ್ಥಳದಲ್ಲೇ ಸಮಾಧಿಯನ್ನು ಗೌರವೋಚಿತವಾಗಿ ನಿರ್ಮಿಸಲಾಯಿತೆಂದು ಹೇಳಲಾಗಿದೆ. ಕೆಳದಿಯರಸರ ಮಾನವೀಯತೆಗೆ ಈ ಘಟನೆ ಸಾಕ್ಷಿಯಾಗಿದೆ. ಮರಾಠರಿಗೂ ಕೆಳದಿಯರಸರಿಗೂ ಪರಸ್ಪರ ಸಂಘರ್ಷ ಸಾಮಾನ್ಯವಾಗಿದ್ದರ ಹಿನ್ನೆಲೆಯಲ್ಲಿ ಈ ಘಟನೆಗೆ ಮಹತ್ವವಿದೆ. ಈ ಸಮಾಧಿಯನ್ನು ಕರ್ನಾಟಕ ಸರ್ಕಾರವು ಸಂರಕ್ಷಿತ ಸ್ಮಾರಕವೆಂದು ಘೋಷಿಸಿದೆ. ಗ್ರಾಮದ ಒಂದು ವೃತ್ತಕ್ಕೆ ಷಹಜಿ ಸರ್ಕಲ್ ಎಂದು ನಾಮಕರಣವಾಗಿರುವುದನ್ನು ಗಮನಿಸಿದೆ.
     ದಿನಾಂಕ 19.10.2016ರಂದು ಈ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿನ ಚಿತ್ರಗಳಿವು:






-ಕ.ವೆಂ.ನಾಗರಾಜ್.
**********
[ಶಹಾಜಿಯ ಚಿತ್ರವನ್ನು ಅಂತರ್ಜಾಲದಿಂದ ಹೆಕ್ಕಿದೆ.]

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ