ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ
ಅನಿಸಿಕೆ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಅನಿಸಿಕೆ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಸೋಮವಾರ, ಮೇ 29, 2017

ಸಜ್ಜನಿಕೆ ಮತ್ತು ಕ್ಷಾತ್ರತೆ



    ಇತ್ತೀಚೆಗೆ ಕಾಶ್ಮೀರ ಕಣಿವೆಯಲ್ಲಿ ಸೈನ್ಯದ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದವರ ಪೈಕಿ ಒಬ್ಬನನ್ನು ಹಿಡಿದು ಜೀಪಿನ ಮುಂಭಾಗದಲ್ಲಿ ಕಟ್ಟಿಹಾಕಿ ಗುಂಪಿನಿಂದ ಆಗುತ್ತಿದ್ದ ಮಾರಣಾಂತಿಕ ಹಲ್ಲೆಯಿಂದ ಸಿಬ್ಬಂದಿ ತಪ್ಪಿಸಿಕೊಂಡ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಸುಮಾರು ೧೨೦೦ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಹಲ್ಲೆಕೋರರ ಗುಂಪಿನಿಂದ ಸಂಭವಿಸಬಹುದಾಗಿದ್ದ ೧೨ ಸೇನಾ ಸಿಬ್ಬಂದಿಯ ಜೀವಹಾನಿ ತಪ್ಪಿಸುವ ಸಲುವಾಗಿ ಸಾಂದರ್ಭಿಕವಾಗಿ ತೆಗೆದುಕೊಂಡ ಆ ನಿರ್ಧಾರ ಸರಿಯೆಂಬುದು ಬಹುತೇಕರ ಅಭಿಪ್ರಾಯವಾಗಿದೆ. ಮಾನವ ಹಕ್ಕಿನ ಉಲ್ಲಂಘನೆ ಎಂದು ವಾದಿಸಿದವರೂ ಇದ್ದಾರೆ. ಸಾಮಾಜಿಕ ಅಂತರ್ಜಾಲ ತಾಣಗಳು, ಫೇಸ್ ಬುಕ್, ಟ್ಡಿಟರ್‌ಗಳಲ್ಲಿ ಸಹ ಚರ್ಚೆ ಗಂಭೀರ ಸ್ವರೂಪದಲ್ಲಿ ನಡೆದಿದೆ, ವೈಯಕ್ತಿಕ ಕೆಸರೆರಚಾಟಗಳೂ ನಡೆದಿವೆ. ಪಾಕಿಸ್ತಾನದ ನೇರ ಹಸ್ತಕ್ಷೇಪವೂ ಸಮಸ್ಯೆ ಬಿಗಡಾಯಿಸಲು ಕಾರಣವೆಂಬುದು ಸುಸ್ಪಷ್ಟ. ಸೇನೆಯ ಸ್ಥೈರ್ಯ ಕುಸಿಯುವಂತೆ ಮಾಡುವ ಕೆಲವು ಮಾಧ್ಯಮಗಳ ಜನರು ಹಾಗೂ ಒಂದು ಕಾಲದಲ್ಲಿ ಗಣ್ಯರೆನ್ನಿಸಿಕೊಂಡಿದ್ದವರ ಹೇಳಿಕೆಗಳು, ಪ್ರಯತ್ನಗಳು ಮಾತ್ರ ದೇಶದ ಹಿತದ ದೃಷ್ಟಿಯಿಂದ ಸಮರ್ಥನೀಯವೆನ್ನಿಸುವುದಿಲ್ಲ. ಟ್ವಿಟರಿನಲ್ಲಿ ಬರುವ ಹೇಳಿಕೆಗಳೂ ಒಂದಕ್ಕೊಂದು ಟಾಂಗ್ ಕೊಡುವ ರೀತಿಯಲ್ಲಿವೆ. ಉದಾಹರಿಸಬೇಕೆಂದರೆ, ಒಬ್ಬರು ಬರೆಯುತ್ತಾರೆ: ಕಣ್ಣು ಮುಚ್ಚಿಕೊಂಡು ಕಲ್ಪಿಸಿಕೊಳ್ಳಿ. ನಿಮ್ಮ ಕುಟುಂಬದ ಒಬ್ಬ ಸದಸ್ಯರನ್ನೇ ಸೈನ್ಯದ ಜೀಪಿನ ಮುಂದೆ ಕಟ್ಟಿ ಅಶಾಂತ ಸ್ಥಿತಿಯಿರುವ ಎಡೆಯಲ್ಲಿ ಕರೆದೊಯ್ಯುತ್ತಿದ್ದಾರೆಂದು ಕಲ್ಪಿಸಿಕೊಳ್ಳಿ. ಈಗ ಕಣ್ಣು ಬಿಡಿ. ನಿಮಗೆ ಏನು ಅನ್ನಿಸುತ್ತದೆ? ನಿಜವಾಗಿ ಹೇಳಿ. ಇದಕ್ಕೆ ಪ್ರತಿಕ್ರಿಯೆಯೂ ಬರುತ್ತದೆ: ನಿಮ್ಮ ತಂದೆ ಜೀಪು ಚಾಲನೆ ಮಾಡುತ್ತಿದ್ದಾರೆ. ನಿಮ್ಮ ತಾಯಿ ಅವರ ಪಕ್ಕದ ಸೀಟಿನಲ್ಲಿ ಕುಳಿತಿದ್ದಾರೆ. ಸಾವಿರಾರು ಜನರು ಗುಂಪು ಕೂಡಿ ಜೀಪಿನ ಮೇಲೆ ಕಲ್ಲುಗಳನ್ನು ತೂರುತ್ತಿದ್ದಾರೆ ಎಂಬ ಸ್ಥಿತಿಯನ್ನು ಕಲ್ಪಿಸಿಕೊಳ್ಳಿ. ಈಗ ನಿಮಗೆ ಏನು ಅನ್ನಿಸುತ್ತದೆ? ನಿಜವಾಗಿ ಹೇಳಿ. ಹಿಂದಿನ ದಶಕಗಳಲ್ಲಿ ಸಮಸ್ಯೆಯ ಇತ್ಯರ್ಥಕ್ಕೆ ರಾಜಕೀಯ ಇಚ್ಛಾಶಕ್ತಿಯ ಕೊರತೆಯ ಜೊತೆಗೆ ದೇಶಹಿತಕ್ಕಿಂತ ರಾಜಕೀಯ ಲಾಭದ ಕಡೆಗೆ ಹೆಚ್ಚಿನ ಗಮನ ಕೊಟ್ಟದ್ದೇ ಸಮಸ್ಯೆ ಉಲ್ಬಣಗೊಂಡು, ನುಸುಳುಕೋರರದೇ ಪ್ರಾಬಲ್ಯವಾಗಲು ಕಾರಣವಾಗಿದೆಯೆಂದರೆ ಅದರಲ್ಲಿ ಸುಳ್ಳಿಲ್ಲ. ಇಂತಹುದೇ ಸಮಸ್ಯೆ ಪಶ್ಚಿಮ ಬಂಗಾಳದಲ್ಲೂ ಇದೆ. ಪಶ್ಚಿಮ ಬಂಗಾಳವನ್ನೂ ಬಾಂಗ್ಲಾದೇಶದೊಂದಿಗೆ ಸೇರಿಸಿಕೊಳ್ಳುವ ಹುನ್ನಾರವೂ ಬಾಂಗ್ಲಾದೇಶೀಯರ ಅಕ್ರಮ ನುಸುಳುವಿಕೆಯ ಹಿನ್ನೆಲೆಯಲ್ಲಿದೆ. ಈಗ ದಿಟ್ಟ ಮತ್ತು ಧೃಢ ಕ್ರಮಗಳನ್ನು ಕೈಗೊಳ್ಳದಿದ್ದರೆ ಮುಂದೆ ಕೇರಳದಲ್ಲೂ ಈ ಸ್ಥಿತಿ ಬರಲಿದೆ. ಕ್ಯಾನ್ಸರ್ ರೋಗದಂತೆ ದೇಶದ ವಿವಿದೆಡೆಗಳಲ್ಲಿ ಸಮಸ್ಯೆ ಹರಡಿದರೂ ಆಶ್ಚರ್ಯವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ದೇಶದ ಸಮಗ್ರತೆ ಮತ್ತು ಹಿತಕ್ಕೆ ಧಕ್ಕೆ ಬರುವಂತಹ ನಡವಳಿಕೆಗಳನ್ನು ಪ್ರದರ್ಶಿಸುವವರ ವಿರುದ್ಧವೂ ಕಠಿಣ ಕ್ರಮ ಅನುಸರಿಸುವುದು ಕಾಲದ ಅಗತ್ಯವಾಗಿದೆ.
     ಭಾರತ ಶಾಂತಿಪ್ರಿಯ ರಾಷ್ಟ್ರ. ತಾನಾಗಿಯೇ ಅದು ನೆರೆ ರಾಷ್ಟ್ರಗಳ ವಿರುದ್ಧ ಯುದ್ಧಕ್ಕೆ ಹೋಗಿಲ್ಲ. ಆದರೆ ಕೇವಲ ರಕ್ಷಣಾತ್ಮಕ ನೀತಿ ಅನುಸರಿಸಿದರೆ ಅದು ಒಂದು ರೀತಿಯಲ್ಲಿ ಸೋತಂತೆಯೇ ಎಂಬುದು ಇದುವರೆಗಿನ ಅನುಭವ. ಇಂತಹ ನೀತಿಯ ಅನುಸರಣೆಯಿಂದ ಭಾರತ ಕಳೆದುಕೊಂಡಿದ್ದೇ ಹೆಚ್ಚು. ಹಿಂದಿನ ಸರ್ಕಾರಗಳು ಸೇನೆಯ ಕೈಗಳನ್ನು ಕಟ್ಟಿಹಾಕಿದ್ದವು. ಒಂದು ಗುಂಡು ಹಾರಿಸಲೂ, ಪ್ರತೀಕಾರ ತೆಗೆದುಕೊಳ್ಳಲೂ ರಾಜಕಾರಣಿಗಳು ಬಿಡುತ್ತಿರಲಿಲ್ಲ. ಸೇನೆಗೆ  ಪ್ರತೀಕಾರ ತೆಗೆದುಕೊಳ್ಳಲು ಮುಕ್ತ ಹಸ್ತ ನೀಡಿದ್ದಿದ್ದರೆ ಸಮಸ್ಯೆ ತಾರ್ಕಿಕ ಅಂತ್ಯ ಕಂಡು ಬಹಳ ವರ್ಷಗಳಾಗಿರುತ್ತಿದ್ದವು. ಆದರೆ, ರಾಜಕೀಯ ಲಾಭವನ್ನು ಮಾತ್ರ ಗಮನದಲ್ಲಿರಿಸುವ ರಾಜಕಾರಣಿಗಳು ಕಾಶ್ಮೀರ ಸಮಸ್ಯೆಯನ್ನು ಇತ್ಯರ್ಥವಾಗದ ಹಂತಕ್ಕೆ ತಂದು ನಿಲ್ಲಿಸಿವೆ. ಪಾಕಿಸ್ತಾನ ತಾನು ಆಕ್ರಮಿಸಿದ ಕಾಶ್ಮೀರದ ಪ್ರಮುಖ ಭಾಗವನ್ನು ಚೀನಾಕ್ಕೆ ಧಾರೆಯೆರೆದಿದೆ. ತನ್ನ ವಶದಲ್ಲಿರುವ ಭಾಗವನ್ನು ಕಾಶ್ಮೀರದೊಳಗೆ ಉಗ್ರರನ್ನು ನುಸುಳಿಸಲು ಬಳಸುತ್ತಿದೆ. ಪಾಕ್ ಸೇನೆ ನುಸುಳುವಿಕೆಗೆ ಬೆಂಗಾವಲಾಗಿದೆ. ಇಂತಹ ಸ್ಥಿತಿಯಲ್ಲಿ ಕಾಶ್ಮೀರ ಕಣಿವೆಯಲ್ಲಿದ್ದ ಮೂಲ ನಿವಾಸಿಗಳನ್ನು ಹೊರದೂಡಿರುವ ನುಸುಳುಕೋರರು ತಮ್ಮ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಅಲ್ಲಿನ ಸರ್ಕಾರವೂ ಪಾಕಿಸ್ತಾನದ ಏಜೆಂಟರಂತೆ ವರ್ತಿಸುತ್ತಿದೆ. ಇಂತಹ ಸ್ಥಿತಿಯಲ್ಲಿ ಅತ್ಯಂತ ತಾಳ್ಮೆಯಿಂದ ದೇಶ ಕಾಯುವ ಕೆಲಸ ಮಾಡುತ್ತಿರುವ ಯೋಧರು ಜೀವವನ್ನು ಅಂಗೈಯಲ್ಲಿ ಹಿಡಿದು ಕರ್ತವ್ಯ ಮಾಡುತ್ತಿದ್ದಾರೆ. ಹೊರದೂಡಲ್ಪಟ್ಟಿರುವ ಕಾಶ್ಮೀರಿ ಪಂಡಿತರ ಪುನರ್ವಸತಿ ಆಗಬೇಕಿದೆ. ಇಂತಹ ಪರಿಸ್ಥಿತಿಯಲ್ಲಿ ಸೇನೆಯ ಸ್ಥೈರ್ಯವನ್ನು ಹೆಚ್ಚಿಸುವ ಕೆಲಸವಾಗಬೇಕಿದೆ ಮತ್ತು ಮಾನವ ಹಕ್ಕು ಉಲ್ಲಂಘನೆ, ಇತ್ಯಾದಿ ಮುಖವಾಡದ ಹಿನ್ನೆಲೆಯಲ್ಲಿ ಉಗ್ರರ ಮತ್ತು ನೆರೆರಾಷ್ಟ್ರದ ಪರವಾಗಿ ಪರೋಕ್ಷ ಬೆಂಬಲ ನೀಡುವ ಅನವಶ್ಯಕ ಮತ್ತು ಅನಪೇಕ್ಷಿತ ಹೇಳಿಕೆಗಳನ್ನು ಕೊಡುವ ಕಪಟಿಗಳನ್ನು ನಿಯಂತ್ರಿಸಬೇಕಿದೆ. ಪಾಕಿಸ್ತಾನ ನಿರಂತರವಾಗಿ ತನ್ನ ಚಟುವಟಿಕೆಗಳನ್ನು ನೇರ ಮತ್ತು ಪರೋಕ್ಷವಾಗಿ ಭಾರತದ ವಿರುದ್ಧ ನಡೆಸುತ್ತಲೇ ಇರುವಾಗ, ಶಾಂತಿಮಂತ್ರದ ಪಾಠ ಜಪಿಸಲು ಹೇಳುವ ಇಂತಹ ಕಪಟ ಮಾನವತಾವಾದಿಗಳು ಅಪಾಯಕಾರಿಗಳು ಎನ್ನಲೇಬೇಕಾಗುತ್ತದೆ. ಭಾರತಕ್ಕೆ ಹಾನಿಯಾದರೆ ಅದಕ್ಕೂ ಟೀಕಿಸುವುದು, ತಿರುಗಿಬಿದ್ದರೆ ಮಾನವ ಹಕ್ಕು ಉಲ್ಲಂಘನೆ ಅನ್ನುವುದು ಅವರ ನೀತಿಯಾಗಿದೆ.
     ಶಾಂತಿ ನಮ್ಮ ಮಂತ್ರವಾಗಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಅದು ಒಮ್ಮುಖವಾದರೆ ಪ್ರಯೋಜನವಿಲ್ಲ. ನಾವಾಗಿ ಆಕ್ರಮಣ ಮಾಡಬೇಕಿಲ್ಲ. ಆದರೆ ಏಟಿಗೆ ಪ್ರತಿ ಏಟು ಎಂಬುದು ನೀತಿಯಾಗಲೇಬೇಕು. ಹಾಗಾದರೆ ಮಾತ್ರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದೀತು. ಸಮಸ್ಯೆ ಇತ್ಯರ್ಥಕ್ಕೆ ದಾರಿಗಳು ಕಂಡಾವು. ಭಯೋತ್ಪಾದಕರಿಗೆ ನಮ್ಮ ದೇಶದೊಳಗಿನವರೇ ಬೆಂಬಲ ಕೊಡುತ್ತಿರುವುದು ಈಗ ಮುಚ್ಚುಮರೆಯಾಗಿ ಉಳಿದಿಲ್ಲ. ಅಂತಹ ಸಹಕಾರ ಕೊಡುವ ಜನರನ್ನು ಗುರುತಿಸಿ ನಿಯಂತ್ರಿಸಲೇಬೇಕು. ರಾಜಕೀಯದ ಕಾರಣಕ್ಕಾಗಿ ಮತ್ತು ಮತಗಳಿಕೆಯ ಸಲುವಾಗಿ ಇದನ್ನು ನಿರ್ಲಕ್ಷಿಸಿದ್ದೇ ಆದರೆ ಗಂಡಾಂತರ ತಪ್ಪಿದ್ದಲ್ಲ. ದೇಶ ಹಲವಾರು ಸಮಸ್ಯೆಗಳಿಂದ ಬಳಲಿ ಬೆಂಡಾಗಿರುವಾಗ, ದೇಶದ ಬೆಂಗಾವಲಿಗಿರುವ ಸೇನೆಯ ನೈತಿಕ ಸ್ಥೈರ್ಯ ಕುಸಿಯದಂತೆ ನೋಡಿಕೊಳ್ಳಬೇಕಾಗಿರುವುದು ನಾಗರಿಕರೆನ್ನಿಸಿಕೊಂಡವರೆಲ್ಲರ ಕರ್ತವ್ಯವಾಗಿದೆ. ಇಂದಿನ ಸಂದಿಗ್ಧ ಸ್ಥಿತಿಯಲ್ಲಿ ನಾವು ಸಜ್ಜನ ಸುಬ್ಬಣ್ಣರಾದರೆ ಪ್ರಯೋಜನವಿಲ್ಲ. ನಮಗೆ ಹೋರಾಡಲು, ಪ್ರತಿಭಟಿಸಲು ಶಕ್ತಿಯಿಲ್ಲದಿರಬಹುದು. ಆದರೆ ಅನ್ಯಾಯದ ವಿರುದ್ಧ ಧ್ವನಿಯೆತ್ತುವವರಿಗೆ ಬೆಂಬಲವಾಗಿ ಇರಲಾದರೂ ಸಾಧ್ಯವಿದೆಯಲ್ಲವೇ? ಅಂತಹವರ ಪರವಾಗಿ ನಿಲ್ಲುವವರ ಸಂಖ್ಯೆ ಹೆಚ್ಚಾಗಿದ್ದರೂ ತೋರ್ಪಡಿಸಿಕೊಳ್ಳಲು ಸಜ್ಜನಿಕೆ, ಹಿಂಜರಿಕೆ, ಭಯ ಅವರನ್ನು ತಡೆಯುತ್ತಿರಬಹುದು. ಇದನ್ನು ಮೆಟ್ಟಿ ನಿಂತರೆ, ಈಗ ಕ್ಷೀಣವಾಗಿ ಕೇಳಿಬರುತ್ತಿರುವ ಧ್ವನಿ ಮುಂದೊಮ್ಮೆ ಶತ್ರುವನ್ನು ನಡುಗಿಸುವ ಸಿಂಹಘರ್ಜನೆಯಾಗುತ್ತದೆ. ಸಜ್ಜನ ಶಕ್ತಿ ಮತ್ತು ಕ್ಷಾತ್ರ ಶಕ್ತಿ ಒಟ್ಟುಗೂಡಿದರೆ ದುಷ್ಟಶಕ್ತಿಗಳ ಆಟ ನಡೆಯುವುದಿಲ್ಲ.
-ಕ.ವೆಂ.ನಾಗರಾಜ್.

ಭಾನುವಾರ, ಅಕ್ಟೋಬರ್ 18, 2015

ಅರವತ್ತೈದು . . .! ಈಗ ಅನಿಸುತಿಹುದು . . .!!


     ಅರವತ್ತೈದನೆಯ ವಯಸ್ಸಿಗೆ ಮುಂದಡಿಟ್ಟಿರುವ ಈ ಸಮಯದಲ್ಲಿ ಮೂಡಿರುವ ಕೆಲವು ಸಮ್ಮಿಶ್ರ ಭಾವಗಳಿಗೆ ಅಕ್ಷರ ರೂಪ ಕೊಡಲು ಪ್ರಯತ್ನಿಸಿರುವೆ. ವಾನಪ್ರಸ್ಥಿಯಾಗಿ ಜೀವನ ಸಾಗಿಸಬೇಕಾದ ಅವಧಿಯಿದು. ತಕ್ಷಣದ ಮನಸ್ಥಿತಿಯ ಕುರಿತು ಸಂಕ್ಷಿಪ್ತವಾಗಿ ಹೇಳಬೇಕೆಂದರೆ:
ಎನ್ನ ಕೊನೆಯ ದಿನಗಳ ಮೊದಲ ದಿನಗಳಿವು
ಬಂದ ದಾರಿಯ ನಿಂತು ನೋಡಿದೆ ಮನವು |
ಗುಣಿಸಿ ಭಾಗಿಸಿ ಕೂಡಿ ಕಳೆದುಳಿದ ಶೇಷವು
ಸೋಲೋ ಗೆಲುವೋ ತಿಳಿಯದ  ವಿಷಣ್ಣಭಾವವು ||
     ಹುಟ್ಟಿದ ದಿನಾಂಕದಿಂದ ಲೆಕ್ಕ ಹಾಕಿದರೆ ಅರವತ್ತನಾಲ್ಕು ವರ್ಷಗಳು ಪೂರ್ಣಗೊಂಡಿವೆ.  ಮಾನಸಿಕವಾಗಿ ಲೆಕ್ಕ ಹಾಕಿದರೆ, ಇನ್ನೂ ಏನಾದರೂ ಮಾಡಬೇಕೆಂಬ ಮನಸ್ಸಿರುವುದರಿಂದ ಹತ್ತು ವರ್ಷ ಚಿಕ್ಕವನಿರಬಹುದು. ಆದರೆ ದೈಹಿಕವಾಗಿ ಕುಗ್ಗಿರುವೆ. ಅನುಭವಿಸಿದ ನೋವು-ನಲಿವುಗಳು, ಸುಖ-ದುಃಖಗಳು, ಬಿದ್ದ ದೈಹಿಕ-ಮಾನಸಿಕ ಪೆಟ್ಟುಗಳು, ಮಾನ-ಅವಮಾನಗಳು, ಪುರಸ್ಕಾರ-ತಿರಸ್ಕಾರಗಳು, ಈಡೇರಿದ ಮತ್ತು ಈಡೇರದ ಬಯಕೆಗಳು, ಮಾಡಬಯಸಿದರೂ ಮಾಡಲಾಗದ ಅಸಹಾಯಕತೆಯ ಪ್ರಸಂಗಗಳು, ವೈಯಕ್ತಿಕ ತಪ್ಪಿಲ್ಲದಿದ್ದರೂ ಅನುಭವಿಸಬೇಕಾಗಿ ಬಂದ ಮುಜುಗರದ ಪ್ರಸಂಗಗಳು, ಇತ್ಯಾದಿ ಕಾರಣಗಳಿಂದಾಗಿ ಭೌತಿಕ ದೇಹಕ್ಕೆ ಇನ್ನೂ ಹತ್ತು-ಹದಿನೈದು ವರ್ಷಗಳು ಜಾಸ್ತಿಯಾಗಿರಬಹುದು. ನನ್ನ ಪರಿಚಯದವರು, ಸ್ನೇಹಿತರು, ಸಹೋದ್ಯೋಗಿಗಳು ಯಾರಾದರೂ ನಿಧನರಾದಾಗಲೂ ಸರತಿಯ ಸಾಲಿನಲ್ಲಿ ಬದುಕಿನ ನಿಜಸತ್ಯವಾದ ಸಾವಿನೆಡೆಗೆ ಮುಂದುವರೆಯುತ್ತಿರುವಂತೆ ಭಾಸವಾಗುತ್ತಿದೆ. ಒಂದಂತೂ ಸತ್ಯ, ಸಾವು ನನ್ನನ್ನು ಹೆದರಿಸಿಲ್ಲ, ನಾನು ಹೆದರಿಯೂ ಇಲ್ಲ. ನಾನು ಅದು ಯಾವಾಗ ಬಂದರೂ ಸ್ವಾಗತಿಸಲು ಸಿದ್ಧನಿದ್ದೇನೆ. ಹಾಗೆಂದು ನಾನು ಸಾಯಬಯಸಿಲ್ಲ. ಸಾಯುವವರೆಗೂ ಬದುಕಿರಲು ಬಯಸಿರುವೆ. ಬದುಕಿರುವುದೆಂದರೆ ಅಂತಃಸಾಕ್ಷಿ ಒಪ್ಪುವಂತೆ ಬದುಕುವುದು ಮತ್ತು ಅಂತಹ ಪೂರಕ ಪರಿಸರಕ್ಕಾಗಿ ಶ್ರಮಿಸುವುದು, ಆಶಿಸುವುದು. ಸಾಯುವ ಮೊದಲು ಬಂಧುಗಳೆಲ್ಲರೂ ಸಾಮರಸ್ಯದಿಂದ ಇರುವುದನ್ನು ಕಾಣಬೇಕೆಂಬ ಬಯಕೆ ಜೀವಂತವಾಗಿದೆ. ಇದೊಂದು ವಿಚಿತ್ರ ಪ್ರಪಂಚ. ಯಾರ ಪರವಾಗಿಯೋ ಅಥವ ವಿರೋಧವಾಗಿಯೋ ಇರಬೇಕೆಂದು ಬಯಸುವವರೇ ಎಲ್ಲರೂ! ಎಲ್ಲರೂ ಚೆನ್ನಾಗಿರಲೆಂದು ಅಪೇಕ್ಷಿಸಿ ಎಲ್ಲರೊಡನೆ ಸಮಭಾವದಿಂದಿರಬಯಸಿದರೆ ಅವರ ಪರವೆಂದು ಇವರು, ಇವರ ಪರವೆಂದು ಅವರು, ಒಟ್ಟಾರೆಯಾಗಿ ಎಲ್ಲರೂ ತಿರಸ್ಕರಿಸಿಬಿಡುವರು! ನನ್ನ ಬಯಕೆ ಎಷ್ಟರ ಮಟ್ಟಿಗೆ ಈಡೇರೀತು ಎಂಬುದನ್ನು ಕಾಲವೇ ಹೇಳಲಿದೆ. ಸ್ವಭಾವತಃ ಆಶಾವಾದಿ ಮತ್ತು ಸುಲಭವಾಗಿ ಕೈಚೆಲ್ಲುವವನಲ್ಲವಾದರೂ, ಕಠಿಣ ವಾಸ್ತವತೆ ನನ್ನಲ್ಲಿ ಒಂದು ರೀತಿಯ ನಿರ್ಲಿಪ್ತಭಾವ ಪ್ರಧಾನವಾಗಿ ಆವರಿಸುವಂತೆ ಮಾಡುತ್ತಿದೆ. 
     ಹೌದು, ಈಗ ಲೆಕ್ಕ ಹಾಕುವ ಹೊತ್ತು. ಈ ದೇಹ ಧರಿಸಿ ಇದುವರೆಗೆ ಸಾಧಿಸಿದ್ದೇನು ಎಂದು ಅವಲೋಕಿಸುವ ಹೊತ್ತು. ಗಳಿಸಿದ್ದೇನು, ಕಳೆದಿದ್ದೇನು, ಉಳಿಸಿದ್ದೇನು, ಕೊಟ್ಟಿದ್ದೇನು, ಪಡೆದಿದ್ದೇನು ಎಂಬುದನ್ನು ಪರೀಕ್ಷಿಸುವ ಹೊತ್ತು. ಅಥರ್ವ ವೇದದಲ್ಲಿನ ಒಂದು ಮಂತ್ರ ಹೇಳುತ್ತದೆ:
ಅನೃಣಾ ಅಸ್ಮಿನ್ನನೃಣಾಃ ಪರಸ್ಮಿನ ತೃತೀಯೇ ಲೋಕೇ ಅನೃಣಾಃ ಸ್ಯಾಮ |
ಯೇ ದೇವಯಾನಾಃ ಪಿತೃಯಾಣಾಶ್ಚ ಲೋಕಾಃ ಸರ್ವಾನ್ಪಥೋ ಅನೃಣಾ ಆ ಕ್ಷಿಯೇಮ || (ಅಥರ್ವ. ೬.೧೧೭.೩.)
    ಋಣರಹಿತರಾಗಿ ಬ್ರಹ್ಮಚರ್ಯದಲ್ಲಿರೋಣ. ಗಾರ್ಹಸ್ಥ್ಯದಲ್ಲಿಯೂ, ಋಣರಹಿತರಾಗಿರೋಣ. ಮೂರನೆಯದಾದ ವಾನಪ್ರಸ್ಥದಲ್ಲಿಯೂ, ಋಣರಹಿತರಾಗಿರೋಣ. ಯಾವ ಆಧ್ಯಾತ್ಮಿಕ ಗತಿಯ ಮತ್ತು ಸಾಂಸಾರಿಕಗತಿಯ ಸ್ಥಿತಿಗತಿಗಳಿವೆಯೋ, ಆ ಎಲ್ಲಾ ಮಾರ್ಗಗಳನ್ನೂ ಋಣರಹಿತರಾಗಿ ಸಂಕ್ರಮಿಸೋಣ. ವಾನಪ್ರಸ್ಥ ತೀರಿದ ಮೇಲೆ, ಸಂನ್ಯಾಸ ಸ್ವೀಕರಿಸಲು ಅರ್ಹರಾದವರು ಸಂನ್ಯಾಸಿಗಳು, ದೇವಯಾನ ಮಾರ್ಗಿಗಳಾಗುತ್ತಾರೆ. ಶಕ್ತಿಯಿಲ್ಲದವರು ಹಾಗೆಯೇ ಉಳಿಯುತ್ತಾರೆ. ಯಾವ ದಾರಿಯಲ್ಲೇ ಉಳಿಯಲಿ, ಋಣ ಮಾತ್ರ ಹೊರಬಾರದು. ಬೇರೆಯವರಿಗಾಗಿ ಏನನ್ನೂ ಒಳಿತನ್ನು ಮಾಡದೆ, ತಾನು ಬೇರೆಯವರಿಂದ ಏನನ್ನೂ ಪಡೆಯುವಂತಿಲ್ಲ ಎಂಬುದು ಇದರ ಕರೆ.
     ಮಾತೃಋಣ, ಪಿತೃಋಣ, ಗುರುಋಣ, ಸಮಾಜಋಣ - ಈ ನಾಲ್ಕನ್ನು ಪ್ರಧಾನವಾಗಿ ಪ್ರತಿ ವ್ಯಕ್ತಿ ಹೊಂದಿರುತ್ತಾನೆ. ಆಯಾ ವ್ಯಕ್ತಿಯ ಗುಣಾವಗುಣಗಳು, ಸಾಧನೆಗಳು ಅವನು ಎಷ್ಟರಮಟ್ಟಿಗೆ ಋಣರಹಿತನಾಗಿದ್ದಾನೆ ಎಂಬುದನ್ನು ನಿರ್ಧರಿಸುತ್ತದೆ. ಎಷ್ಟರಮಟ್ಟಿಗೆ ಋಣರಹಿತರಾಗಿ ಬಾಳಲು ಸಾಧ್ಯ ಎಂಬುದು ವಿಚಾರಾರ್ಹ ಸಂಗತಿ. ಈ ಜನ್ಮದ ಶೇಷ ಆಯಸ್ಸಿನಲ್ಲಿ ಯಾರು ಯಾರಿಗೆ ಎಷ್ಟು ಋಣಿಯಾಗಿದ್ದೇನೋ ಅವರುಗಳ ಋಣ ತೀರಿಸುವ ಹೊಣೆ ನನ್ನ ಮೇಲಿದೆ. ಎಷ್ಟರಮಟ್ಟಿಗೆ ಋಣಮುಕ್ತನಾದೇನು ಎಂಬುದು ಗೊತ್ತಿಲ್ಲ. ಋಣಮುಕ್ತನಾಗುವ, ಮೇಲೇರುವ ಇಚ್ಛೆಯಂತೂ ಇದ್ದು, ಈ ದಿಸೆಯಲ್ಲಿ ಕ್ರಮಿಸಬೇಕಾದ ಹಾದಿ ಸುಲಭವಲ್ಲವೆಂಬ ಅರಿವು ನನಗಿದೆ. ಋಣಮುಕ್ತನಾಗಿಸೆಂದು ದೇವನಲ್ಲಿ ನನ್ನ ಮೊರೆಯಿದೆ.  
     ಮಾನಸಿಕವಾಗಿ ವಾನಪ್ರಸ್ಥ ಜೀವನದ ಬಗ್ಗೆ ಆಸಕ್ತಭಾವವಿದೆ. ವಾನಪ್ರಸ್ಥವೆಂದರೆ ಕಾಡಿಗೆ ಹೋಗಿ ಧ್ಯಾನ, ತಪಸ್ಸಿಗೆ ತೊಡಗುವುದೆಂದಲ್ಲ. ಮೋಕ್ಷ ಮತ್ತು ಧರ್ಮದ ಕುರಿತು ಚಿಂತನೆ ನಡೆಸುವುದು, ಆ ಹಾದಿಯಲ್ಲಿ ಕ್ರಮಿಸುವುದು, ಲೌಕಿಕ ಸಂಗತಿಗಳಲ್ಲಿ ಆಸಕ್ತಿ ಕಡಿಮೆ ಮಾಡಿಕೊಳ್ಳುವುದು. ಅಷ್ಟೆ.  ನನ್ನ ದೃಷ್ಟಿಯಲ್ಲಿ ಧರ್ಮ ಮತ್ತು ಮೋಕ್ಷದ ಚಿಂತನೆಯೆಂದರೆ ಸಮಾಜಮುಖಿಯಾಗಿ, ದೇಶಮುಖಿಯಾಗಿ ಅಂತರಂಗ  ಯಾವುದನ್ನು ಒಳ್ಳೆಯದು ಎಂದು ಹೇಳುತ್ತದೋ ಆ ಹಾದಿಯಲ್ಲಿ ಸಾಗುವುದು, ಪ್ರಯತ್ನಪೂರ್ವಕವಾಗಿ ಧನಾತ್ಮಕವಾಗಿರುವುದು(ಪಾಸಿಟಿವ್),  ಋಣಾತ್ಮಕ(ನೆಗೆಟಿವ್)  ವಿಚಾರಗಳಿಂದ ದೂರವಿರುವುದು. ಈ ಪಥ ಬದಲಾವಣೆ ಸುಲಭವಾದುದಲ್ಲವಾದರೂ ಈಗ ಆಗದಿದ್ದರೆ ಮತ್ತೆ ಯಾವಾಗ? 
     ಕಳೆದ ಆರು-ಏಳು  ವರ್ಷಗಳಿಂದ ಬರವಣಿಗೆಯ ಕಾರ್ಯದಲ್ಲಿ ಸಕ್ರಿಯನಾಗಿ ತೊಡಗಿಕೊಂಡಿದ್ದು  ಮನದ ಭಾವನೆಗಳು ಬರವಣಿಗೆಯ ರೂಪದಲ್ಲಿ ಹೊರಹೊಮ್ಮುತ್ತಿವೆ. ನನಗೆ ಮಾನಸಿಕ ಶಕ್ತಿ ನೀಡುತ್ತಿರುವುದೂ ಇದೇ ಆಗಿದೆ. ಮೂರು ವರ್ಷಗಳಿಂದ ಹಾಸನ ಜಿಲ್ಲಾ ಪತ್ರಿಕೆ ಜನಮಿತ್ರದಲ್ಲಿ 'ಚಿಂತನ' ಅಂಕಣ ಕಾಲಂ ಮತ್ತು ಜನಹಿತ ಪತ್ರಿಕೆ ಪ್ರಾರಂಭವಾದಾಗಿನಿಂದ 'ಜನಕಲ್ಯಾಣ' ಅಂಕಣ ಕಾಲಮ್ಮುಗಳಲ್ಲಿ ಲೇಖನಗಳು ಪ್ರಕಟಗೊಳ್ಳುತ್ತಿವೆ. ಹಾಸನದ ಆಕಾಶವಾಣಿಯಲ್ಲಿ ನನ್ನ ಹಲವಾರು 'ಚಿಂತನ'ಗಳು ಬಿತ್ತರಗೊಂಡಿವೆ. ನಮ್ಮ ಕವಿಮನೆತನದ ಕುಟುಂಬ ಪತ್ರಿಕೆ 'ಕವಿಕಿರಣ'ದ ಸಂಪಾದಕನಾಗಿ ಇಲ್ಲಿಯವರೆಗೆ 15 ಅರ್ಧವಾರ್ಷಿಕ ಸಂಚಿಕೆಗಳು ಹೊರಬಂದಿದ್ದು ಮೆಚ್ಚುಗೆ ಗಳಿಸಿವೆ. ಕಾಲಾನಂತರದಲ್ಲಿ ನನ್ನದಾಗಿ ಏನಾದರೂ ಅಲ್ಪ ಸ್ವಲ್ಪ ಉಳಿದರೆ ಅದು ನನ್ನ ಬರವಣಿಗೆ ಮಾತ್ರ. ಅದೂ ನಂತರದ ಕೆಲವು ಅವಧಿಯವರೆಗೆ ಮಾತ್ರ ಹಾಗೂ ಯಾರಾದರೂ ಗುರುತಿಸಿದಾಗ ಮಾತ್ರ ಎಂಬುದರ ಅರಿವಿದೆ. ಮುನಿಶ್ರೀ ತರುಣಸಾಗರಜಿಯವರು ಹೇಳಿದ ಮಾತೊಂದು ನನ್ನಲ್ಲಿ ಅಚ್ಚೊತ್ತಿದೆ. ಅದೆಂದರೆ "ಸತ್ತ ನಂತರವೂ ಜನ ನಿಮ್ಮನ್ನು ಮರೆಯಬಾರದು ಎಂದು ನೀವು ಭಾವಿಸುವುದಾದರೆ ಎರಡರಲ್ಲಿ ಒಂದು ಕೆಲಸವನ್ನಾದರೂ ಖಂಡಿತವಾಗಿ ಮಾಡಿ. ಓದಲು ಸಾಧ್ಯವಿರುವ ಯಾವುದನ್ನಾದರೂ ಬರೆದುಬಿಡಿ ಅಥವಾ ಬರೆಯಲು ಸಾಧ್ಯವಿರುವಂಥದ್ದನ್ನು ಏನಾದರೂ ಬರೆದುಬಿಡಿ. ಓದಲು ಲಾಯಕ್ಕಾಗಿರುವಂಥಹದೇನಾದರೂ ಬರೆಯಿರಿ ಅಥವಾ ಬರೆಯುವುದಕ್ಕೆ ಲಾಯಕ್ಕಾಗಿರುವಂತಹ ಕೆಲಸವನ್ನೇನಾದರೂ ಮಾಡಿಬಿಡಿ. ಪ್ರಪಂಚದಲ್ಲಿ ಯಾವುದೇ ವ್ಯಕ್ತಿಯನ್ನು ಆತನ ಬಹುಮೂಲ್ಯ ಕೃತಿಗಳಿಗಾಗಿ ಅಥವಾ ಕೃತ್ಯಗಳಿಗಾಗಿ ಮಾತ್ರ ನೆನಪು ಮಾಡಿಕೊಳ್ಳಲಾಗುತ್ತದೆ."  ವಿವಿಧ ಹುದ್ದೆಗಳಲ್ಲಿ ಮತ್ತು ತಹಸೀಲ್ದಾರನಾಗಿ ಕಾರ್ಯ ನಿರ್ವಹಿಸಿದ ಅವಧಿಯಲ್ಲಿ ಅದು ದೇವರು ನನಗೆ ಸಾರ್ವಜನಿಕ ಸೇವೆ ಮಾಡಲು ಕೊಟ್ಟ ಸದವಕಾಶವೆಂದು ಭಾವಿಸಿ ಕೆಲಸ ಮಾಡಿರುವೆ. ಸ್ವಇಚ್ಛಾ ನಿವೃತ್ತಿ ಪಡೆದಿರದಿದ್ದರೆ ಹಿರಿಯ ಅಸಿಸ್ಟೆಂಟ್ ಕಮಿಷನರರಾಗಿ ನಿವೃತ್ತನಾಗಬಹುದಿತ್ತು. ನನ್ನ ಮನ ಹಗುರ ಮಾಡಿಕೊಳ್ಳಲೂ ಈ ಬರವಣಿಗೆ ನನಗೆ ನೆರವಾಗಿದೆ. ಅರಳು-ಮರಳು ಆವರಿಸುವ ಮುನ್ನ, ಶಕ್ತಿ ಕುಂದುವ ಮುನ್ನ, ಮರೆವು ಬರುವ ಮುನ್ನ, ಮನ ನುಡಿದಿದ್ದನ್ನು ಕಪ್ಪು-ಬಿಳಿಯಲ್ಲಿ ಮೂಡಿಸುವ ಬಯಕೆಯಿದೆ. ಮುಪ್ಪಿನಲ್ಲಿ 'ಊರು ಹೋಗು ಎನ್ನುತ್ತಿದೆ, ಕಾಡು ಬಾ ಎನ್ನುತ್ತಿದೆ' ಎಂಬ ಭಾವ ಬರುವ ಮುನ್ನ ತೋಚಿದ್ದನ್ನು ಗೀಚಬೇಕೆನ್ನಿಸಿದೆ. ನಾನೊಬ್ಬ ಪಂಡಿತ, ದೊಡ್ಡ ಬರಹಗಾರನೆಂದಲ್ಲ, ನನಗೆ ಪಾಂಡಿತ್ಯವಿದೆಯೆಂದೂ ನಾನು ಅಂದುಕೊಂಡಿಲ್ಲ. ಇದನ್ನು ಮನದೊಳಗಣ ತುಂಬಿದ ಭಾವನೆಗಳನ್ನು ಹೊರಹಾಕಿ ಹಗುರಗೊಳ್ಳುವ ಇರಾದೆಯೆನ್ನಬಹುದು. 'ಬಿಟ್ಟರೂ ಬಿಡದೀ ಮಾಯೆ' ಅನ್ನುವುದು ಇದಕ್ಕೇ ಇರಬೇಕು. ಈ ಪ್ರವೃತ್ತಿಯನ್ನು ಸಮಾಜಮುಖಿಯಾಗಿ ಉಪಯೋಗಿಸಿಕೊಳ್ಳವುದೂ ವಾನಪ್ರಸ್ಥದ ಭಾಗವಾಗುತ್ತದೆ ಎಂಬುದು ನನ್ನ ಅಭಿಪ್ರಾಯ. 
     ಆತ್ಮ ಅವಿನಾಶಿಯಾದ್ದರಿಂದ ಸಂಬಂಧಿಸಿದ ವ್ಯಕ್ತಿ ಅಪೇಕ್ಷೆ ಪಟ್ಟಲ್ಲಿ ಸತ್ತನಂತರದಲ್ಲಿ ಅವನ ಇಚ್ಛೆಯಂತೆ ಮೃತ ಶರೀರವನ್ನು ವಿಲೇವಾರಿ ಮಾಡಿದರೆ ತಪ್ಪಿಲ್ಲವೆಂದು ನನ್ನ ಅನಿಸಿಕೆ. ಆತ್ಮದ ಸದ್ಗತಿ ಕೋರಿ ಮಾಡುವ ಇತರ ಕರ್ಮಗಳನ್ನು ಸಂಬಂಧಿಕರು ಬಯಸಿದಲ್ಲಿ ಮಾಡಬಹುದು ಅಥವ ಬಿಡಬಹುದು. ಶ್ರಾದ್ಧಾದಿ ಕಾರ್ಯಗಳು ತಮ್ಮ ಹಿರಿಯರನ್ನು ನೆನೆಸಿಕೊಂಡು ಸಲ್ಲಿಸುವ ಕೃತಜ್ಞತೆಯಾಗಿದ್ದು, ಅದರ ಫಲವೇನಿದ್ದರೂ ಮಾಡುವವರಿಗಷ್ಟೆ.  ಯಾವುದೇ ವ್ಯಕ್ತಿಗೆ ಆತನ ಕರ್ಮಾನುಸಾರ ಫಲಗಳು ಸಿಕ್ಕುವುದೆಂಬುದು ತಿಳಿದವರು ಹೇಳುವಾಗ, ಅವನಿಗೆ ಮರಣದ ನಂತರ ಇತರರು ಒಳ್ಳೆಯ ಫಲ ದೊರೆಯುವಂತೆ ಮಾಡುವುದು ಹೇಗೆ ಸಾಧ್ಯ? ಪ್ರಳಯ, ಪ್ರವಾಹ, ಇತ್ಯಾದಿ ನೈಸರ್ಗಿಕ ಕಾರಣಗಳಿಂದ ಉತ್ತರಕ್ರಿಯೆ ಮಾಡುವವರೂ ಇಲ್ಲದಂತೆ ನಾಶವಾಗುವ ಸಹಸ್ರಾರು ಜೀವಗಳಿಗೆ ಸದ್ಗತಿ ದೊರೆಯುವುದಿಲ್ಲವೆಂದು ಹೇಳಲಾಗುವುದೆ? ಆದ್ದರಿಂದ ನನ್ನ ಮರಣಾನಂತರ ನನ್ನ ದೇಹದ ಉಪಯೋಗಕ್ಕೆ ಬರುವಂತಹ ಅಂಗಗಳನ್ನು ತೆಗೆದು ಯಾರಿಗಾದರೂ ಉಪಯೋಗಕ್ಕೆ ಬರುವಂತೆ ನೋಡಿಕೊಳ್ಳಲು ಮತ್ತು ನನ್ನ ದೇಹವನ್ನು ಸಹ ಹತ್ತಿರದ ಯಾವುದಾದರೂ ವೈದ್ಯಕೀಯ ಕಾಲೇಜಿಗೆ ದಾನ ಮಾಡುವ ಮನಸ್ಸನ್ನು ಸಂಬಂಧಿಕರು ಮಾಡಬೇಕೆಂದು ಬಯಸುವೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಇದು ನನ್ನ ಉಯಿಲು ಎಂದು ಭಾವಿಸಬಹುದು. ನನ್ನ ಸಂಬಂಧಿಕರಿಗಾಗಲೀ, ಮಿತ್ರರಿಗಾಗಲೀ ಈ ಅಭಿಪ್ರಾಯದಿಂದ ನೋವಾಗದಿರಲಿ ಎಂಬುದು ಮನದಾಳದ ಬಯಕೆ. ವಾಸ್ತವತೆ ಅರಿತಲ್ಲಿ, ಬದುಕಿನ ಮಹತ್ವ ತಿಳಿದಲ್ಲಿ ನನ್ನ ಈ ಬಯಕೆ ನಿಜವಾಗಿ ಬದುಕುವ ಬಯಕೆ ಎಂಬುದು ಅರ್ಥವಾಗಬಹುದು. 
     ಹಿರಿಯ ನಾಗರಿಕರ ಸಾಲಿಗೆ ಸೇರಿ ದೈಹಿಕ ಶಕ್ತಿ ಕುಂದಲು ಮತ್ತು ಮುಪ್ಪು ತನ್ನ ಇರುವನ್ನು ತೋರಿಸಲು ಪ್ರಾರಂಭಿಸಿರುವ ಸಮಯವಿದು. ನಿಂದಾಸ್ತುತಿಗಳಿಗೆ ಪಕ್ಕಾಗುವ, ಅದನ್ನು ಯೋಗ್ಯತಾನುಸಾರ ಪಡೆಯುವ, ನಿಂದೆ, ಹೀಗಳಿಕೆಗಳನ್ನು ಎದುರಿಸಲು/ಪ್ರತಿಭಟಿಸಲು ಮನಸ್ಸಿದ್ದರೂ ವಸ್ತುಸ್ಥಿತಿ ವಿರುದ್ಧವಾಗಿರುವ, ಮೌನವಾಗಿ ನುಂಗಬೇಕಾಗಿ ಬರುವ ಸಮಯವಿದು. ಕಸುವು ಇದ್ದಾಗ ಮತ್ತು ಕಸುವು ಇಲ್ಲದಾಗ, ಅಧಿಕಾರವಿದ್ದಾಗ ಮತ್ತು ಇಲ್ಲದಿದ್ದಾಗ, ಆರೋಗ್ಯವಿದ್ದಾಗ ಮತ್ತು ಇಲ್ಲದಿದ್ದಾಗ, ವಯಸ್ಕನಾಗಿದ್ದಾಗ ಮತ್ತು ಮುಪ್ಪಡರಿದಾಗ ವ್ಯಕ್ತಿಯ ಬಗ್ಗೆ ಇತರರ ಮನೋಭಾವ ಹೇಗಿರುತ್ತದೆ, ಹೇಗೆ ಬದಲಾಗುತ್ತದೆ ಎಂಬುದರ ಅರಿವು ನನಗಿದೆ. ಇದನ್ನು ಸರಿ-ತಪ್ಪುಗಳ ಅಳತೆಗೋಲಿನಲ್ಲಿ ಅಳೆಯಲಾಗುವುದಿಲ್ಲ. ವಾಸ್ತವತೆಯ ಬೆಳಕಿನಲ್ಲಿ ನೋಡಬೇಕು. ವಯಸ್ಸಿದ್ದಾಗ ಆಶ್ರಯ ಕೊಡುತ್ತಿದ್ದವರು ಮುಪ್ಪಿನಲ್ಲಿ ಆಶ್ರಯ ಬಯಸುವಂತಹ ಸ್ಥಿತಿ ಬರುತ್ತದೆ. ನನಗೆ ಇಂತಹ ಸ್ಥಿತಿ ಬಂದಿದೆಯೆಂದು ನಾನು ಹೇಳುತ್ತಿಲ್ಲ. ವಸ್ತುಸ್ಥಿತಿಯ ವಿಶ್ಲೇಷಣೆ ಮಾಡುತ್ತಿದ್ದೇನಷ್ಟೆ. 'ಅದೀನಾ ಸ್ಯಾಮ ಶರದಃ ಶತಮ್' ಎಂಬಂತೆ ಇರುವಷ್ಟು ಕಾಲ ಯಾರಿಗೂ ಹೊರೆಯೆನಿಸದಂತೆ, ದೈನ್ಯತೆ ಬಾರದಂತೆ ಬಾಳಬೇಕೆಂಬ ಬಯಕೆ ಈಡೇರಲಿ ಎಂದು ಆ ದೇವನಲ್ಲಿ ನನ್ನ ಬೇಡಿಕೆಯಿದೆ. 
     ಇದು ಎಲ್ಲರಿಗೂ ಶುಭವ ಬಯಸುವ ಹೊತ್ತು, ಎಲ್ಲದರಲ್ಲೂ ಶುಭವ ಕಾಣುವ ಹೊತ್ತು. 
ಶುಭವ ನೋಡದಿರೆ ಕಣ್ಣಿದ್ದು ಕುರುಡ
ಶುಭವ ಕೇಳದಿರೆ ಕಿವಿಯಿದ್ದು ಕಿವುಡ |
ಶುಭವ ನುಡಿಯದಿರೆ ಬಾಯಿದ್ದು ಮೂಕ
ಇದ್ದೂ ಇಲ್ಲದವನಾಗದಿರು ಮೂಢ ||

'ಸರ್ವೇ ಜನಾಃ ಸುಖಿನೋ ಭವನ್ತು'
-ಕ.ವೆಂ.ನಾಗರಾಜ್.

ಗುರುವಾರ, ಜನವರಿ 3, 2013

ಟಿವಿಯ ಪಲ್ಲವಿ ನೋಡುಗರ ಅನುಪಲ್ಲವಿ

     4-5 ವರ್ಷದ ಹೆಣ್ಣು ಮಗುವನ್ನು ಹೇಗೆ ಸಾಯಿಸಬೇಕು, ಯಾವ ರೀತಿ ಯೋಜನೆಗಳನ್ನು ಹಾಕಬೇಕು, ಅವಳಿಗೆ ಹಾವು ಕಚ್ಚಿದರೆ ಒಳ್ಳೆಯ ಚಿಕಿತ್ಸೆ ಕೊಡದೆ ಸಾಯಿಸಬೇಕೆಂದು ಡಾಕ್ಟರರಿಗೆ ಲಂಚ ಕೊಡಬೇಕೇ? ಅಲಮೈರಾದಲ್ಲಿ ತುರುಕಿ ಬೀಗ ಹಾಕಿ ಉಸಿರುಗಟ್ಟಿಸಿ ಸಾಯಿಸಬೇಕೇ? ಕಣ್ಣಾಮುಚ್ಚೆ ಆಟ ಆಡುವ ನೆಪದಲ್ಲಿ ಮಗುವಿಗೆ ಕಣ್ಣಿಗೆ ಬಟ್ಟೆ ಕಟ್ಟಿ ನೀರಿನ ಸಂಪಿನೊಳಗೆ ಮುಳುಗಿಸಬೇಕೇ? ಮಹಡಿಯ ಮೇಲಿನಿಂದ ದೂಕಬೇಕೇ?, , , , , ಇತ್ಯಾದಿ ಹಲವಾರು ಪ್ಲಾನುಗಳು ನಿಮಗೆ ಬೇಕೇ? ಸಾಯಿಸಿದರೂ ಅನುಮಾನ ಬರದಂತೆ ಹೇಗೆ ಸಾಯಿಸಬಹುದು? ಅದರಲ್ಲೂ ಮಗುವಿನ ಅಜ್ಜಿ, ಚಿಕ್ಕಪ್ಪ, ಅತ್ತೆ, ಹತ್ತಿರದ ಸಂಬಂಧಿಗಳು ಮಗುವನ್ನು ಸಾಯಿಸುವ ಯೋಚನೆಯಲ್ಲೇ ಸದಾ ಇರುವುದನ್ನು ಕಾಣಬೇಕೇ? ಹಾಗಾದರೆ ಸುವರ್ಣ ಚಾನೆಲ್ಲಿನಲ್ಲಿ ಪ್ರಸಾರವಾಗುತ್ತಿರುವ 'ಪಲ್ಲವಿ ಅನುಪಲ್ಲವಿ' ಧಾರಾವಾಹಿ ತಪ್ಪದೆ ನೋಡಿ. ನಿಮಗೂ ಇಂತಹ ಹಲವಾರು ಮನೆಹಾಳು ಐಡಿಯಾಗಳು ಬರಬಹುದು. ಈ ಧಾರಾವಾಹಿ ನಿಮಗೆ ಇಷ್ಟವಾದರೆ ಅದರ ಲೇಖಕರು, ಪಾತ್ರಧಾರಿಗಳು, ಚಾನೆಲ್ ಮಾಲಿಕರು, ಕಾರ್ಯಕ್ರಮ ನಿರ್ವಾಹಕರು, ಪ್ರಾಯೋಜಕರು,... ಎಲ್ಲರನ್ನೂ ಅಭಿನಂದಿಸಿರಿ. ಇದು ವಿಕೃತರ ಸೃಷ್ಟಿ ಎನ್ನಿಸಿದರೆ ಸಂಬಂಧಿಸಿದವರಿಗೆ ಧಿಕ್ಕಾರ-ಗಟ್ಟಿಧ್ವನಿಯ ಧಿಕ್ಕಾರ ಹೇಳಲು ಮರೆಯದಿರಿ.

     ಇದು ಫೇಸ್ ಬುಕ್ಕಿನಲ್ಲಿ ನಾನು ಹಂಚಿಕೊಂಡ ನನ್ನ ಅನಿಸಿಕೆ. ಇದಕ್ಕೆ ಬಂದ ಪ್ರತಿಕ್ರಿಯೆಗಳಿವು:

ಶಂಕರ ದೇವಾಡಿಗ ಕೆಂಚನೂರು, Vishwanatha Sharma, Vishwanatha Sharma and 12 others like this.
ಹೆಸರು ಶಿವಾನಂದ್ ಉಸಿರು ಕನ್ನಡ: ಈ ಹಾಳಾದ ಮದ್ಯಮಗಳಿಂದ ಒಳ್ಳೆಂದಕಿಂತ ಕೆಟ್ಟದ್ದೇ ಜಾಸ್ತಿ, ಇಲ್ಲಿ ಮಾನವೀಯ ಮೌಲ್ಯಗಳಿಗಿಂತ ಅವರ TRP ನೆ ಅವರಿಗೆ ಮುಕ್ಯ, ಸರಕಾರ ಇನ್ನಾದರೂ ಎಚ್ಚೆತ್ತುಕೊಂಡು ಮಾದ್ಯಮಗಳಿಗೆ ಕಡಿವಾಣ ಹಾಕಬೇಕು
Tuesday at 3:29pm · Like · 1
Parthasarathy Narasingarao ದಿಕ್ಕಾರ !
Tuesday at 3:33pm · Unlike · 1
Adur Chandru ಯಾಕ್ ದೇವ್ರು ಇವತ್ತು ಭ್ರಷ್ಟರ ಬಣ್ಣ ಬಯಲು ಮಾಡ್ತಿರೋದು ಮಾದ್ಯಮ ಅಲ್ವ............ ಆದ್ರೂ ಸ್ವಲ್ಪ ಜಾಸ್ತಿ ಆಯ್ತು. ಇದಕ್ಕೆ ನಮ್ಮದು ವಿರೋದ ಇದೆ
Tuesday at 3:34pm · Unlike · 1
ಹೆಸರು ಶಿವಾನಂದ್ ಉಸಿರು ಕನ್ನಡ ಎಲ್ಲಾ ತರದಲ್ಲೂ ಕೆಟ್ಟದ್ದು ಅಂತಾ ಹೇಳ್ತಾ ಇಲ್ಲ, ಅವರು ಮುನ್ನುಗ್ಗುವ ಬರದಲ್ಲಿ ಮೌಲ್ಯಗಳನ್ನ ಮರಿತಾ ಇದ್ದಾರೆ , ಬ್ರಷ್ಟರ ಬಣ್ಣ ಬಯಲು ಮಾಡ್ತಾ ಜನರ ಮುಖಗಳಿಗೂ ಚೆನ್ನಾಗಿ ಬಣ್ಣ ಬಳಿತಿದಾರೆ,
Tuesday at 3:38pm · Unlike · 2
Kavi Nagaraj ಹೇಗೆ ಭ್ರಷ್ಠಾಚಾರ ಮಾಡಬೇಕು, ಹೇಗೆ ಅತ್ಯಾಚಾರ ಮಾಡಬೇಕು, ಹೇಗೆ ಕೊಲೆ ಮಾಡಬೇಕು, ಹೇಗೆ ಹುಟ್ಟಲಿರುವ ಮಗುವನ್ನು ಹುಟ್ಟುವ ಮೊದಲೇ ಸಾಯಿಸಬೇಕು, ಹೇಗೆ ಬಾಲ್ಯವಿವಾಹ ಮಾಡಬೇಕು, ಇತ್ಯಾದಿಗಳನ್ನು ತೊರಿಸಿಕೊಡುತ್ತಿರುವವರೂ ಆ ಮಾಧ್ಯಮಗಳೇ!!
Tuesday at 3:42pm · Like · 3
ಸತೀಶ್. ಎನ್ ನಾಸ ದೇಶದ ಇಂದಿನ ಸ್ಥಿತಿಗೆ ನೇರವಾಗಿ ಮಾಧ್ಯಮಗಳೇ ಹೊಣೆಗಾರರು
Tuesday at 4:16pm · Unlike · 2
Vasanth Kumar ಮಾನವೀಯ ಮೌಲ್ಯಗಳಿಲ್ಲದ... ತುಕ್ಕು ಹಿಡಿದ ಪ್ರಲಾಪಗಳು... ಈ ಧಾರಾವಾಹಿಗಳು..
Tuesday at 4:45pm · Edited · Unlike · 2
Dhanapala Nelavagilu naanu khandisuve.
Tuesday at 7:30pm via mobile · Unlike · 1
Hariharapura Sridhar ನಾಗರಾಜ್, ಇದು ನಿಮ್ಮ ಕಣ್ಣಿಗೆ ಹೇಗೆ ಬಿತ್ತು? ಛೇ! ನಮ್ಮ ತಾಯಂದಿರಿಗೆ ಏನು ಹೇಳೋಣ! ಪ್ರಸಾರಮಾಡುವವರಿಗೆ, ಅದನ್ನು ನೋಡುವವರಿಗೆ ಧಿಕ್ಕಾರವಿರಲಿ!!
Tuesday at 8:59pm · Unlike · 2
Gajanana Naik dikaara dikaara ..
Tuesday at 9:34pm · Unlike · 1
Hariharapura Sridhar ನನಗ್ಯಾಕೋ ನಮ್ಮ ತಾಯಂದಿರಮೇಲೆ ಬಲು ಬೇಸರವಾಗುತ್ತಿದೆ. ನಿಮಗೆ ಸಿಟ್ಟು ಬರುತ್ತೆ, ಅಲ್ವಾ? ನಾನಂತೂ ಹತ್ತಾರು ಮನೆಗಳಲ್ಲಿ ತಾಯಂದಿರನ್ನು ನೋಡಿ ಬಲು ನೊಂದುಕೊಂಡಿದ್ದೇನೆ. ದಿನಕ್ಕೆ ನಾಲ್ಕಾರು ದಾರಾವಾಹಿಗಳನ್ನು ಅವರು ನೋಡಲೇ ಬೇಕು. ಅದೇ ದಾರವಾಹಿಯ ಸಮಯದಲ್ಲಿ ಯಾವುದಾದರೂ ಮುಖ್ಯ ಸಮಾಚಾರಗಳು ಪ್ರಕಟವಾಗುತ್ತಿದ್ದರೂ ಸುದ್ಧಿ ನೋಡಲು ಅವಕಾಶವಿಲ್ಲ. ಒಂದು ವೇಳೆ ಸುದ್ಧಿ ನೋಡಬೇಕೆಂದು ನೀವು ಚಾನಲ್ ಬದಲಿಸದರೆ ಕಥೆ ಮುಗಿದಂತೆಯೇ! 
"ಏನೋ ಬೇಜಾರು, ಅಂತಾ ದಾರಾವಾಹಿ ನೋಡ್ತಾರೆ, ಅವರಿಗ್ಯಾಕ್ರೀ ತೊಂದರೆ ಕೊಡ್ತೀರಿ? "......ದಾರಾವಾಹಿಯನ್ನು ನೋಡುವ ತಾಯಂದಿರ ಹೆಣ್ಣುಮಕ್ಕಳಿರ್ತಾರಲ್ಲಾ ಅಥವಾ ಸೊಸೆ ಇರ್ತಾರಲ್ಲಾ, ಅವರು ಅವರ ಪತಿಗೆ ಹೇಳುವ ಮಾತಿದು.
ಎಷ್ಟೋ ಮನೆಯಲ್ಲಿ ಈ ದಾರಾವಾಹಿಯನ್ನು ನೋಡಲು ಅವಕಾಶವಿಲ್ಲವೆಂದು ಎಲ್ಲಿ ದಾರಾವಾಹಿಯನ್ನು ನೋ ಡಲು ಯಾರೂ ಅಡ್ಡಿಮಾಡುವುದಿಲ್ಲವೋ ಅಂತಹಾ ಮಕ್ಕಳ ಮನೆಗೆ ಅವರ ತಾಯಂದಿರು ಹೋಗಿಬಿಡ್ತಾರೆ!!
ಹೌದು, ವಯಸ್ಸು ಅರವತ್ತು-ಎಪ್ಪತ್ತು ಆಗಿರುವ ತಾಯಂದಿರ ಕಥೆ ಇದು.
ಹೋಗಲೀ ನೋಡುವ ದಾರಾವಾಹಿಯ ಕಥೆ ಏನು ಗೊತ್ತಾ? ಗಂಡನಿಗೆ ಮೋಸ ಮಾಡಿ ಪ್ರಿಯಕರನ ಜೊತೆ ಮೋಜು ಮಾಡುವ ಹೆಣ್ಣಿನ ದೃಶ್ಯ! ಪ್ರಿಯಕರನಿಗಾಗಿ ಗಂಡನನ್ನು ಕೊಲೆಮಾಡಲು ಸಂಚು ರೂಪಿಸುವ ದೃಶ್ಯ! ತಮ್ಮ ಕಛೇರಿಯಲ್ಲಿ ಕೆಲಸಮಾಡುವ ಹುಡುಗಿರ ಜೊತೆ ಚೆಲ್ಲಾಟ‘ವಾಡುವ ಗೃಹಸ್ಥ ಭೂಪರು! 
ಹುಡುಗಿಯರ ರೌಢಿಸಮ್ !!
ಅಬ್ಭಬ್ಭಾ!! ನಿಜವಾಗಿ ಹೇಳ್ರೀ ನೀವು ನೋಡುವ ದಾರಾವಾಹಿಗಳಲ್ಲಿ ಮೇಲಿನ ಯಾವುದಾದರೊಂದು ದೃಶ್ಯ ಇಲ್ಲದೆ ದಾರಾವಾಹಿ ನಡೆಯುತ್ತದೆಯೇ? ಇಂತಹಾ ದಾರಾವಾಹಿಗಳನ್ನು ನೋಡುತ್ತಾ ಬಹುಪಾಲು ಕಾಲಕಳೆಯುವ ನಮ್ಮ ತಾಯಂದಿರನ್ನು ನೋಡಿದಾಗ ಅವರ ಇಂತಹ ಸ್ಥಿತಿ ಕಂಡು ಮರುಕ ಹುಟ್ಟುವುದಿಲ್ಲವೇ?
ಟಿ.ವಿ ಯಲ್ಲಿ ಮನಸ್ಸಿಗೆ ಮುದ ನೀಡುವ ಕಾರ್ಯಕ್ರಮಗಳು ನಡೆಯುವುದಿಲ್ಲವೇ? ಹತ್ತಾರು ಚಾನಲ್ ಗಳಲ್ಲಿ ನಿಮ್ಮ ಮನಸ್ಸಿಗೆ ಮುದನೀಡುವ, ನಿಮ್ಮ ಅರಿವನ್ನು ಹೆಚ್ಚಿಸುವ, ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಅನುಕೂಲವಾಗಬಲ್ಲ ಕಾರ್ಯಕ್ರಮಗಳು ಪ್ರಸಾರವಾಗುತ್ತವೆ. ಆದರೆ ಅವೆಲ್ಲಾ ಇಂತಹ ದಾರಾವಾಹಿಗಳನ್ನು ನೋಡುವವರಿಗೆ ಹಿಡಿಸದು, ಅಷ್ಟೇಕೆ, ಮಕ್ಕಳು ನೋಡಬಹುದಾದ ಕಾರ್ಯಕ್ರಮಗಳನ್ನು ಮಕ್ಕಳು ನೋಡುತ್ತಿದ್ದರೆ, ನಿಮಗೇನೂ ಕೆಲಸ ವಿಲ್ಲವೇನ್ರೋ, ಓದಿಕೊಳ್ಳಿ, ಎಂದು ಮಕ್ಕಳನ್ನು ಬೈದು, ಈ ತಾಯಂದಿರು ಮಾಡುವ ಕೆಲಸವೇನು ಗೊತ್ತಾ? ಮನೆಹಾಳುಮಾಡುವ ದಾರಾವಾಹಿಗಳನ್ನು ನೋಡುವುದೇ ಆಗಿದೆ. ಅಸಭ್ಯ ದೃಶ್ಯಗಳನ್ನು ನೋಡುವವರಲ್ಲಿ ಅತಿ ಹೆಚ್ಚಿನವರು ಅರವತ್ತು ಎಪ್ಪತ್ತು ವರ್ಷದ ತಾಯಂದಿರು, ಎಂಬ ನಾನು ಕಂಡ ಸತ್ಯವನ್ನು ಅತ್ಯಂತ ನೋವಿನಿಂದ ಹೇಳ ಬಯಸುತ್ತೇನೆ, ಅಲ್ಲದೆ ವಿಚಾರ ಮಾಡಲು ಸಮರ್ಥರಾದವರು ಅವರ ವಯಸ್ಸು ಎಷ್ಟೇ ಇರಲಿ, ಕೆಟ್ಟ ದಾರಾವಾಹಿಗಳನ್ನು ನೋಡುವವರಿಗೆ ಅವರು ಹಿರಿಯರಾದರೂ ಚಿಂತೆಇಲ್ಲ ತಿಳಿ ಹೇಳಲೇ ಬೇಕು. ದೂರ ದರ್ಶನ ನೋಡಲು ಒಂದು ನೀತಿ ಸಂಹಿತೆಯನ್ನು ರೂಪಿಸಿಕೊಳ್ಳುವುದು ಅತ್ಯಂತ ಅನಿವಾರ್ಯವಾಗಿದೆ.
ನನ್ನ ಮಾತಿಗೆ ಹಲವರು ಆಕ್ಷೇಪಣೆ ಮಾಡುತ್ತಾರೆಂಬ ಅರಿವು ನನಗಿದೆ." ಕೇವಲ ಹೆಂಗಸರು ನಿಮ್ಮ ಕಣ್ಣಿಗೆ ಬಿದ್ರಾ? ಗಂಡಸರು ನೋಡುವುದಿಲ್ಲವೇ? ಅನ್ನೋ ಮಾತು ಬಂದೇ ಬರುತ್ತೆ. ಹೌದು, ಗಂಡಸರು ನೋಡಿದರೆ ಅದೂ ತಪ್ಪೇ. ಆದರೆ ನನ್ನ ಕಣ್ಣಿಗೆ ತಾಯಂದಿರ ಸಂಖ್ಯೆ ಹೆಚ್ಚು ಕಂಡಿದೆ. ಅವರಲ್ಲಿ ಕ್ಷಮೆ ಕೋರುತ್ತಾ " ಅಮ್ಮಾ, ನೀವು ಒಂದು ಮನೆಯ ಹಿರಿಯರು, ಮನೆಯಲ್ಲಿ ಕೆಲವರಿಗೆ ತಾಯಿ, ಕೆಲವರಿಗೆ ಅತ್ತೆ, ಕೆಲವರಿಗೆ ಅಜ್ಜಿ.....ಆದರೆ ನೀವು ಎಲ್ಲರಿಗೂ ದೇವರು. ನೀವು ಸಮಾಜವನ್ನು ತಿದ್ದಬಲ್ಲಿರಿ, ನಿಮ್ಮನ್ನು ತಿದ್ದುವ ಹೀನ ಸ್ಥಿತಿ ಈ ಸಮಾಜಕ್ಕೆ ಬಾರದಿರಲೆಂದೇ ಭಗವಂತನಲ್ಲಿ ನನ್ನ ಪ್ರಾರ್ಥನೆ.
Tuesday at 9:52pm · Unlike · 3
Ramaprasad KV   
Tuesday at 11:29pm · Like
Sunil Agadi ಕೆಲವೊಂದು ಧಾರಾವಾಹಿಗಳು ಒಳ್ಳೆಯ ಸಂದೇಶಕಿಂತ ಜನರನ್ನು ಹಾದಿ ತಪ್ಪಿಸುವುದೇ ಜಾಸ್ತಿ ಹಾಗಾಗಿ ಜನರೇ ಇಂತಹ ಕಾರ್ಯಕ್ರಮಗಳನ್ನು ನೋಡಬೇಕೋ ಬೇಡೋ ಎಂದು ನಿರ್ಧಾರ ಮಾಡಬೇಕು. 
Yesterday at 7:33am · Unlike · 2
Kavi Nagaraj ಶ್ರೀಧರ ಮತ್ತು ಮಿತ್ರರ ಅಭಿಪ್ರಾಯಗಳು ಸರಿಯಾಗಿವೆ. ಇಂತಹ ಕಥೆಗಳನ್ನು ಬರೆಯುವ 'ಸಾಯಿತಿ'ಗಳನ್ನು, ಅದನ್ನು ಪ್ರಸಾರ ಮಾಡುವ ಚಾನೆಲ್ಲುಗಳನ್ನು ಖಂಡಿಸುವ ಪ್ರವೃತ್ತಿ ಬೆಳೆಸಿಕೊಳ್ಳೋಣ! ಸದ್ಯಕ್ಕೆ ಅದೊಂದೇ ಕಾಣಿಸುತ್ತಿರುವ ದಾರಿ!!
Yesterday at 9:31am · Like
Kavi Nagaraj ಫೇಸ್ ಬುಕ್ಕಿನಲ್ಲಿ ಸುವರ್ಣ ಚಾನೆಲ್ಲಿನ ಗುಂಪು ಇದೆ. ಅದರಲ್ಲಿ ನಿಮ್ಮ ಸಂದೇಶ (message) ದಾಖಲಿಸಿ.
Yesterday at 10:30am · Like · 1
Vasudevarao Rao These channels should be bombed to smithereens.
17 hours ago · Like
Prasad Kalladka ಡಬ್ಬ ದಾರಾವಾಹಿಗಳು
8 hours ago via mobile · Like
Kavi Nagaraj ಮುಂದುವರೆದ ಧಾರಾವಾಹಿಯ ಕಂತಿನಲ್ಲಿ ಆ ಎಳೆಯ ಮಗುವನ್ನು ಅಪಹರಿಸಿ ಕೊಲೆ ಮಾಡಲು ಸುಪಾರಿ ಕೊಡಿಸಿದ್ದಾರೆ!! ವಿಕೃತಾಧಮರು!!
12 minutes ago · Like · 1
Vishwamitra KN hennu makkalannu saayisuvavarige nanna dikkaara ide
10 hours ago · Unlike · 
·         anthoshkumar Lm ನನ್ನದೂ ಧಿಕ್ಕಾರವಿದೆ ನಾಗರಾಜ್ ಸರ್. ಇವತ್ತಿನ ಎಷ್ಟೋ ಅಪರಾಧಗಳಿಗೆ ಕಾರಣವಾಗುತ್ತಿರುವುದು ದೃಶ್ಯ ಮಾಧ್ಯಮದ "ಪಾಠ"ದಿಂದಾಗಿಯೇ!!
17 hours ago · Like      

Chandrashekhar Laxmeshwar Nannadu ondu Dikkaara...serial na srishtikartarige..

Bande Raja Mouni Kavi karmashesha

Parvathi Mahadev Serials galalli baree asooye hotteuri dwesha hagethana kuhaka ivugalanne hecchu doddadaagi prathibimbisi samaajavanna haalu maaduva sandeshave athiyaagiruttade. nijavaagi dhikkaare helabeku.. 

Mamatha Keelar ಆದರೂ ಜನರು ನೋಡ್ತಾರಲ್ಲ ಎಲ್ಲ ಕೆಲಸ ಬಿಟ್ಟು...

Girish Rv dharedra aa directru yavat saytano

16 hours ago via mobile · Like