ಆತ್ಮೀಯರೇ ಪ್ರಣಾಮಗಳು, ಕವಿಮನದಾಳದ ಮಾತುಗಳಿಗಾಗಿ ಕವಿಮನಕ್ಕೆ ತಮಗೆ ಹೃತ್ಪೂರ್ವಕ ಸ್ವಾಗತ
ಇತರೆ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಇತರೆ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಸೋಮವಾರ, ನವೆಂಬರ್ 17, 2014

ಕನ್ನಡ ರಾಜ್ಯೋತ್ಸವ

ದಿನಾಂಕ 1.11.2014ರಂದು ಹಾಸನದ ಶ್ರೀ ದರ್ಮಸ್ಥಳ ಮಂಜುನಾಥ ಆಯುರ್ವೇದಿಕ್ ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಂದರ್ಭದ ಫೋಟೋಗಳು:




















ಶನಿವಾರ, ಆಗಸ್ಟ್ 17, 2013

ಭಾವಪೂರ್ಣ ಶ್ರದ್ಧಾಂಜಲಿ


ನೀನು ಇಲ್ಲವೆಂದು ಕಣ್ಣೀರು ಸುರಿಸಲೆ?
ನೀನು ಬದುಕಿದ್ದೆಯೆಂದು ಹೆಮ್ಮೆ ಪಡಲೆ?
ಮತ್ತೆ ಜನಿಸಿ ಬರಲೆಂದು ದೇವನ ಕೇಳಲೆ?
ನೀನು ಉಳಿಸಿದುದೇನೆಂದು ಹುಡುಕಲೆ?
ನೀನಿಲ್ಲದೆ ಹೃದಯ ಖಾಲಿಯೆಂದು ಅಳಲೆ?
ಬದುಕು ಶೂನ್ಯವೆಂದು ವಿರಾಗಿಯಾಗಲೆ?
ಹೃದಯದಲಿ ನಿನ್ನ ನೆನಪು ತುಂಬಿದೆಯೆನ್ನಲೆ?
ಬೆನ್ನು ಹಾಕಿ ಹಿಂದಿನ ದಿನಗಳಲ್ಲೆ ಇರಲೆ?
ನಿನ್ನೆಯ ನೆನಪಿನಲಿ ನಾಳೆ ಹಸನಾಗಿಸಲೆ?
ನೀನು ಇಲ್ಲವೆಂದು ಮನ ಗಟ್ಟಿಗೊಳಿಸಲೆ?
ನಿನ್ನ ನೆನಪನ್ನು ಚಿರವಿರಿಸಿ ಬದುಕಲೆ?
ಅತ್ತು ಕರೆದು ಹಗುರಾಗಿ ಮರೆಯಲೆ?
ಪ್ರೇಮ ವಾತ್ಸಲ್ಯದಮಲಿನಲಿ ನಗುನಗುತಾ 
ನಿನ್ನಿಚ್ಛೆಯ ಕೆಲಸಗಳ ಮುನ್ನಡೆಸಲೆ?

-ಕ.ವೆಂ.ನಾಗರಾಜ್.

ಬುಧವಾರ, ಏಪ್ರಿಲ್ 3, 2013

ಗೋಹತ್ಯೆ ಕುರಿತು ಕುರ್ ಆನಿನಲ್ಲಿ ಏನು ಹೇಳಿದೆ?


     ಮೌ| ಸಯ್ಯದ್ ಅಬುಲ್ ಆಲಾ ಮೌದೂದಿ(ರ)ರವರು ಪವಿತ್ರ ಕುರ್ ಆನಿನ ಭಾವಾನುವಾದ ಮತ್ತು ಸಂಕ್ಷಿಪ್ತ ವಿವರಣೆಯನ್ನು ಉರ್ದುವಿನಲ್ಲಿ ಮಾಡಿದ್ದು, ಇದನ್ನು ಶ್ರೀ ಎಸ್. ಅಬ್ದುಲ್ ಗಫ್ಫಾರ್ ರವರು ಕನ್ನಡದಲ್ಲಿ ಅನುವಾದಿಸಿದ್ದಾರೆ. ಈ ಕೃತಿಯನ್ನು ಮೌಲಾನಾ ಸಯ್ಯದ್ ಯೂಸುಫ್, ಇಬ್ರಾಹಿಮ್ ಸಯೀದ್ ಮತ್ತು ಮುಹಮ್ಮದ್ ಸಾದುಲ್ಲಾರವರು ಸಮೀಕ್ಷಿಸಿದ್ದಾರೆ. ಈ ಕೃತಿಯಲ್ಲಿ ಕುರ್ ಆನಿನ ಪದಶಃ ಅನುವಾದ ಮಾಡದೆ ಅದರ ಭಾವಾನುವಾದವನ್ನು ಸಂಕ್ಷಿಪ್ತ ಅಡಿ ಟಿಪ್ಪಣಿಗಳೊಂದಿಗೆ ಮಾಡಲಾಗಿದೆ. ಪದಶಃ ಅನುವಾದದಲ್ಲಿ ಪೂರ್ಣ ಮತ್ತು ಸರಿಯಾದ ಅರ್ಥ ಹೊರಹೊಮ್ಮುವುದು ಕಷ್ಟವೆಂಬ ಕಾರಣದಿಂದ, ಅಲ್ಲದೆ ಪದಶಃ ಅನುವಾದದ ಕೃತಿಗಳು ಲಭ್ಯವೂ ಇರುವುದರಿಂದ ಈ ರೀತಿ ಮಾಡಲಾಗಿದೆಯೆಂದು ಅನುವಾದಕರು ನಿವೇದಿಸಿಕೊಂಡಿದ್ದಾರೆ. 
    ಈ ಕೃತಿಯಲ್ಲಿ ತಿಳಿಸಿರುವಂತೆ, ಗೋಹತ್ಯೆ ಕುರಿತು ಕುರ್ ಆನಿನಲ್ಲಿ ಬರುವ ಉಲ್ಲೇಖಗಳ ಭಾವಾನುವಾದ ಮತ್ತು ಅಡಿ ಟಿಪ್ಪಣಿಗಳು ಹೀಗಿವೆ: 



ಶುಕ್ರವಾರ, ಜನವರಿ 18, 2013

ಲಂಡನ್ ಮಕ್ಕಳ ಸಂಸ್ಕೃತ ಪ್ರೇಮ






"ಬೈ ಡ್ಯಾಡ್, ಬೈ ಮಾಮ್, ಬೈ ತಾತ್"
     ಒಂದನೆಯ ತರಗತಿಯಲ್ಲಿ ಓದುತ್ತಿರುವ ನನ್ನ ಮೊಮ್ಮಗಳು ಪುಸ್ತಕದ ಮೂಟೆಯನ್ನು ಹೊತ್ತುಕೊಂಡು ಶಾಲೆಯ ಬಸ್ಸಿಗೆ ಹತ್ತುವಾಗ ಕೈಬೀಸಿ ಹೇಳಿದ್ದು ಹೀಗೆ. ಅವಳು ನನ್ನನ್ನು 'ತಾತ್' ಎಂದು ಕರೆಯುವುದಕ್ಕೆ ಕೊಟ್ಟಿದ್ದ ವಿವರಣೆ: "ತಾತಾ, ಗ್ರ್ಯಾಂಡ್ ಫಾದರ್, ಗ್ರ್ಯಾಂಡ್ ಪಾ ಈಸ್ ಟೂ ಲಾಂಗ್. ಸೋ ಐ ಕಾಲ್ ಯು ತಾತ್!" ಲಕ್ಷಗಟ್ಟಲೆ ಡೊನೇಶನ್ ಕೊಟ್ಟು ಸೇರಿಸಿದ್ದ ಆ ಪ್ರತಿಷ್ಠಿತ  ಶಾಲೆಯಲ್ಲಿ ಕನ್ನಡ ಮಾತನಾಡುವಂತಿರಲಿಲ್ಲ. ಎಲ್ಲಾ ಇಂಗ್ಲಿಷಿನಲ್ಲೇ ಆಗಬೇಕು. ಬೆಂಗಳೂರಿನಲ್ಲಿ ಕೆಲವು ದಶಕಗಳ ಹಿಂದೆ ಮಕ್ಕಳು ಮಾತ್ರ ಇಂಗ್ಲಿಷಿನಲ್ಲಿ ಮಾತನಾಡುತ್ತಿದ್ದವು. ಈಗ ಆ ಮಕ್ಕಳೂ ದೊಡ್ಡವರಾಗಿದ್ದಾರೆ. ಈಗ ಎಲ್ಲರೂ, ಎಲ್ಲೆಲ್ಲೂ ಇಂಗ್ಲಿಷಿನಲ್ಲೇ ಮಾತನಾಡುತ್ತಾರೆ. ಬೆಂಗಳೂರಿನಲ್ಲಿ ಅವಿದ್ಯಾವಂತರೂ ಸಹ ಇಂಗ್ಲಿಷಿನಲ್ಲಿ ಸರಾಗವಾಗಿ ಮಾತನಾಡಬಲ್ಲರು. ಅದೇ ಕನ್ನಡ ಮಾತನಾಡಬೇಕಾದರೆ ಕನ್ನಡಿಗರೇ ಬಹಳ ಕಷ್ಟಪಡುತ್ತಾರೆ. ಕನ್ನಡ ಬಾರದಿದ್ದವರು ಮಾತನಾಡುವ ಕನ್ನಡದ ಉಚ್ಛಾರದಂತೆ ಕನ್ನಡಿಗರೇ ಮಾತನಾಡುವುದನ್ನು ಕಂಡು ಅಚ್ಚರಿಪಟ್ಟಿದ್ದೇನೆ. ಹಿಂದೆ ಲಾರ್ಡ್ ಮೆಕಾಲೆ ಹೇಳಿದ್ದ, "ಈ ರೀತಿಯ ವಿದ್ಯಾಭ್ಯಾಸ ಕ್ರಮದಿಂದ ಇನ್ನು ಕೆಲವು ದಶಕಗಳಲ್ಲಿ ಇಂಡಿಯಾದಲ್ಲಿ ಕರಿಚರ್ಮದ ಬ್ರಿಟಿಷರು ಇರುತ್ತಾರೆ" ಎಂಬ ಮಾತು ನಿಜವಾಗಿದೆ. ಆದರೆ ಯಾವ ದೇಶದ ಗುಲಾಮಗಿರಿಯ ಕಾಣಿಕೆಯಾದ ಇಂಗ್ಲಿಷನ್ನು ಹೆಮ್ಮೆಯಿಂದ ಆಡುತ್ತೇವೋ, ಆ ದೇಶದ ರಾಜಧಾನಿ ಲಂಡನ್ನಿಗೆ ಸಂಬಂಧಿಸಿದ ಸಂಗತಿಯನ್ನು ನಿಮ್ಮೊಡನೆ ಹಂಚಿಕೊಳ್ಳುವೆ.
     ಅದು ಲಂಡನ್ನಿನ ಸೈಂಟ್ ಜೇಮ್ಸ್ ಜೂನಿಯರ್ ಸ್ಕೂಲ್. ಅಲ್ಲಿ ೧೯೭೫ರಿಂದಲೂ ಸಂಸ್ಕೃತವನ್ನು ಕಲಿಸಲಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಸಂಸ್ಕೃತ ಕಲಿಯುತ್ತಿರುವವರ ಸಂಖ್ಯೆ ಇಂಗ್ಲೆಂಡಿನಲ್ಲಿ ಮಿತಿಯನ್ನು ಮೀರಿ ಬೆಳೆಯುತ್ತಿದೆ ಎಂದರೆ ನಿಮಗೆ ಆಶ್ಚರ್ಯವಾಗಬಹುದು. ಇಂಗ್ಲಿಷ್ ಮಾತನಾಡುವವರಿಗೆ ಸಂಸ್ಕೃತದ ಉಚ್ಛಾರ ಕಷ್ಟವಾದರೂ ಅಲ್ಲಿ ಸಂಸ್ಕೃತ ಕಲಿಯಲು ಬರುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ವಾರ್ಷಿಕ ಸಂಸ್ಕೃತ ಸಂಭಾಷಣಾ ಸ್ಪರ್ಧೆಯಲ್ಲಿ ತಮ್ಮ ಪುಟಾಣಿಗಳು ಭಾಗವಹಿಸಿ, ವೇದ ಮಂತ್ರ, ಉಪನಿಷತ್ತಿನ ಶ್ಲೋಕಗಳನ್ನು ಹೇಳುತ್ತಿದ್ದರೆ ಅದನ್ನು ಕೇಳುವ ಪೋಷಕರು, ತಂದೆ-ತಾಯಿಗಳು ಹೆಮ್ಮೆಯಿಂದ ಚಪ್ಪಾಳೆ ತಟ್ಟಿ ಹುರಿದುಂಬಿಸುತ್ತಾರೆ. ಸಂಸ್ಕೃತ ವಿಭಾಗದ ಮುಖ್ಯಸ್ಥ ವಾರ್ವಿಕ್ ಜೆಸೊಪ್, "ಸಂಸ್ಕೃತ ಭಾಷೆ ಅದ್ಭುತವಾಗಿದೆ. ಸಂಸ್ಕೃತದ ಸಾಹಿತ್ಯ ಸ್ಫೂರ್ತಿದಾಯಕವಾಗಿದೆ ಮತ್ತು ತತ್ವಾದರ್ಶಗಳಿಂದ ಕೂಡಿದೆ. ಅದಕ್ಕಾಗಿ ಅದನ್ನು ಮಕ್ಕಳಿಗೆ ಕಲಿಸಿಕೊಡುತ್ತಿದ್ದೇವೆ" ಎನ್ನುತ್ತಾರೆ. ಇದೇ ಮಾತನ್ನು ಇಲ್ಲಿ ಯಾರಾದರೂ ಹೇಳಿದರೆ ವಿಚಾರವಂತರೆಂದು ಹಣೆಪಟ್ಟಿ ಹಚ್ಚಿಕೊಂಡವರು ಏನು ಹೇಳಬಹುದೆಂಬುದು ನಿಮಗೇ ಬಿಟ್ಟ ವಿಷಯ. ಸಂಸ್ಕೃತ ಕಲಿಯುವ ಮಕ್ಕಳನ್ನು ಕೇಳಿದರೆ ಅವರು ಹೇಳುವುದೇನೆಂದರೆ, "ಅದು ನಮಗೆ ಬಹಳ ಖುಷಿ ಕೊಡುತ್ತದೆ. ಅದು ನಮ್ಮ ಮೆಚ್ಚಿನ ಭಾಷೆ!"
     ಸಂಸ್ಕೃತ ಕಲಿಯುತ್ತಿದ್ದ ಒಬ್ಬ ವಿದ್ಯಾರ್ಥಿಯ ಹೃದಯದ ಮಾತಿದು: "ಸಂಸ್ಕೃತ ಕಲಿಯುವುದು ಒಂದು ವಿಶೇಷ ಅನುಭವ. ಅದನ್ನು ಕಲಿಯಲು ನನಗೆ ಬಹಳ ಆನಂದವಾಗುತ್ತದೆ, ಏಕೆಂದರೆ ಸಂಸ್ಕೃತ ಕಲಿಸುತ್ತಿರುವ ಕೆಲವೇ ಶಾಲೆಗಳಿದ್ದು, ಅದರ ಪೈಕಿ ನಾವೂ ಒಬ್ಬರು ಎಂಬುದು. ಅದು ನಮಗೆ ಹಲವಾರು ರೀತಿಯಲ್ಲಿ ಉಪಯೋಗವಾಗಿದೆ. ನಮ್ಮ ಉಚ್ಚಾರಣೆ ಸುಧಾರಿಸುತ್ತದೆ ಮತ್ತು ಪದಸಂಪತ್ತನ್ನು ಹೆಚ್ಚಿಸುತ್ತದೆ. ಪಾರಮಾರ್ಥಿಕ ಅನುಕೂಲಗಳೂ ಇವೆ. ರಾಮಾಯಣ ಮತ್ತು ಮಹಾಭಾರತದಂತಹ ಹಲವಾರು ಕಥೆಗಳಿದ್ದು, ಹಿಂದೆ ಪ್ರಪಂಚದಲ್ಲಿ ಏನೆಲ್ಲಾ ಆಯಿತು ಎಂಬುದನ್ನೂ ತಿಳಿಯಲು ಸಹಾಯ ಮಾಡುತ್ತದೆ."
     ಈ ಶಾಲೆಯಲ್ಲಿ ೪ ರಿಂದ ೧೮ ವರ್ಷಗಳವರೆಗೆ ಸಂಸ್ಕೃತ ಕಲಿಯಲು ಸೌಲಭ್ಯವಿದೆ. ನಂತರದಲ್ಲಿ ಪ್ರತಿಷ್ಠಿತ ಶಾಲೆಗಳಾದ ಆಕ್ಸ್ ಫರ್ಡ್, ಕೇಂಬ್ರಿಡ್ಜ್, ಎಡಿನ್ ಬರೋ ಮುಂತಾದ ಶಾಲೆಗಳಲ್ಲಿ ಮುಂದುವರೆದ ಸಂಸ್ಕೃತ ವಿದ್ಯಾಭಾಸ ಮಾಡಬಹುದಾಗಿದೆ. ಲಂಡನ್ ಶಾಲೆಗೆ ಸಂಬಂಧಿಸಿದ ಒಂದು ಕಿರುವಿಡಿಯೋ ಅನ್ನು ಈ ಲಿಂಕಿನಲ್ಲಿ ನೋಡಬಹುದು.
     ನಾನು ಕೇವಲ ಇಂಗ್ಲೆಂಡಿನ ಉದಾಹರಣೆ ನೀಡಿದ್ದರೂ, ಅಮೆರಿಕಾ ಸೇರಿದಂತೆ ಹಲವಾರು ವಿದೇಶಿ ರಾಷ್ಟ್ರಗಳಲ್ಲಿ ಸಂಸ್ಕೃತ ಕಲಿಕೆ ಗಣನೀಯವಾಗಿ ಹೆಚ್ಚಿದ್ದು, ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿ ಪಡೆದು ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವವರ ಸಂಖ್ಯೆ ಕಡಿಮೆಯಲ್ಲ. ಊರು ಕೊಳ್ಳೆ ಹೋದ ನಂತರದಲ್ಲಿ ನಮ್ಮವರಿಗೆ ಎಚ್ಚರವಾಗಬಹುದು.
-ಕ.ವೆಂ.ನಾಗರಾಜ್.

ಮಂಗಳವಾರ, ಸೆಪ್ಟೆಂಬರ್ 11, 2012

ಓದುಗರಿಗೆ ವಂದನೆ

     10163 ಪುಟವೀಕ್ಷಣೆಗಳನ್ನು ಕಂಡಿರುವ  'ಕವಿಮನ'ದ ಭಾವಗಳನ್ನು ಅವಲೋಕಿಸಿದ, ಮೆಚ್ಚಿದ, ಪ್ರತಿಕ್ರಿಯಿಸಿದ ಎಲ್ಲರಿಗೂ ವಂದನೆಗಳು.
-ಕ.ವೆಂ.ನಾಗರಾಜ್.

ರಾಷ್ಟ್ರಗಳ ಪ್ರಕಾರವಾಗಿ ಪುಟದ ವೀಕ್ಷಣೆಗಳು
ಬ್ಲಾಗ್ ವೀಕ್ಷಕರೊಂದಿಗೆ ಅತ್ಯಂತ ಹೆಚ್ಚು ಜನಪ್ರಿಯ ರಾಷ್ಟ್ರಗಳ ಗ್ರಾಫ್‌
ಪ್ರವೇಶಪುಟವೀಕ್ಷಣೆಗಳು
ಭಾರತ
6995
ಅಮೇರಿಕಾ ಸಂಯುಕ್ತ ಸಂಸ್ಥಾನ
1323
ರಶಿಯಾ
972
ಮಲೇಶಿಯಾ
123
ಜರ್ಮನಿ
59
ಸಂಯುಕ್ತ ಅರಬ್ ಎಮಿರೇಟಸ್
55
ಕೆನಡಾ
47
ದಕ್ಷಿಣ ಕೋರಿಯಾ
38
ಬ್ರಿಟನ್/ಇಂಗ್ಲೆಂಡ್
36
ಉಕ್ರೈನ್
30